ಜಾತ್ರಾ ನಿಮಿತ್ತ ದೇವಿಯ ಮೂರ್ತಿಯನ್ನು ಹೊತ್ತೊಯ್ಯುತ್ತಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಟ್ಯಾಂಕರ್ ಒಂದು ಹರಿದು ಮೂರು ಜನ ಮೃತಪಟ್ಟು 15ಕ್ಕೂ ಹೆಚ್ಚು ಜನ ತೀವೃವಾಗಿ ಗಾಯಗೊಂಡ ಘಟನೆ ಕೋಲಾರದಲ್ಲಿ ನಡೆದಿದೆ.
ಶ್ರೀನಿವಾಸಪುರ ತಾಲ್ಲೂಕಿನ ಕಡಪದ ಬೆಂಗಳೂರು- ಕಡಪ ಹೆದ್ದಾರಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಶ್ರೀರಾಮ ರೆಡ್ಡಿ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮಂಜುನಾಥ್ ಮತ್ತು ಕಿಶೋರ್ ಎಂಬುವವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 15 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಅವರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.