ಕೋಲಾರದ ಗಡಿಯಲ್ಲಿ ಕಾಡಾನೆಗಳ ಉಪಟಳ

Webdunia
ಶುಕ್ರವಾರ, 16 ಜುಲೈ 2021 (15:17 IST)
ಕೋಲಾರದ ಗಡಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನಾಡಗುಮ್ಮನಹಳ್ಳಿ ಗ್ರಾಮದ ಬಳಿ ರೈತನ ಮೇಲೆ ದಾಳಿ ನಡೆಸಿರುವ ಕಾಡಾನೆ ರೈತನನ್ನ ತುಳಿದು ಸಾಯಿಸಿದೆ. ಗ್ರಾಮದ ಭತ್ತೆಪ್ಪ (50) ಎಂಬ ರೈತ ಆನೆ ದಾಳಿಯಿಂದ ಮೃತಪಟ್ಟಿದ್ದು, ನೆಲಗಡಲೆ ಭಿತ್ತನೆ ಮಾಡಿದ ಜಮೀನಿನ ಬಳಿ ಹೋದಾಗ ಕಾಡಾನೆ ದಾಳಿ ನಡೆಸಿದೆ. ಇನ್ನು ಕಳೆದ ಮೂರು ದಿನಗಳ‌ ಹಿಂದಷ್ಟೆ ರೈತ ಮಹಿಳೆಯ ಮೇಲೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಳು, ಒಂದೇ ವಾರದಲ್ಲಿ ಎರಡನೇ ಪ್ರಕರಣ ಇದಾಗಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಡಿಯಲ್ಲೇ  ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು,
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಗಡಿ ಗ್ರಾಮಗಳ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಂಧೀಜಿಯನ್ನು ಎರಡನೇ ಬಾರಿ ಕೊಂದಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ದಿಡೀರ್ ಡಿಕೆ ಶಿವಕುಮಾರ್ ಭೇಟಿಯಾದ ರೇಣುಕಾಚಾರ್ಯ

ಅಪಘಾತದಲ್ಲಿ ಸಾವನ್ನಪ್ಪಿದ್ದ ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಪುತ್ರಿ ಬಗ್ಗೆ ಸರ್ಕಾರದ ಮಹತ್ವದ ತೀರ್ಮಾನ

ಡಿಕೆ ಶಿವಕುಮಾರ್ ಸಿಎಂ ಹುದ್ದೆ ನಿರ್ಧಾರವಾಗಬೇಕಾದ್ರೆ ಇವರೊಬ್ಬರು ಬರಬೇಕು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments