Webdunia - Bharat's app for daily news and videos

Install App

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆ ಯತ್ನ..?

Webdunia
ಬುಧವಾರ, 5 ಜುಲೈ 2017 (17:14 IST)
ಬೆಂಗಳೂರಿನ ಏಟ್ರಿಯಾ ಹೋಟೆಲ್`ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಎನ್`ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದರು. ಕೋವಿಂದ್ ಕೋಲಿ ಸಮಾಜಕ್ಕೆಸೇರಿದವರಾಗಿರುವುದರಿಂದ ಕೋವಿಂದ್ ಅವರನ್ನ ಭೇಟಿ ಮಾಡಲು ಕೋಲಿ ಸಮಾಜದ ಮುಖಂಡರು ಆಗಮಿಸಿದ್ದರು. ಆದರೆ, ಕೋಲಿ ಸಮಾಜದ ಮುಖಂಡರ ಭೇಟಿಗೆ ಅವಕಾಶ ನೀಡಲಿಲ್ಲ ಎಂದು ಕೋಲಿ ಸಮಾಜದ ಮುಖಂಡರು ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅರವಿಂದ ಲಿಂಬಾವಳಿ ಜೊತೆ ಕೋಲಿ ಸಮಾಜದ ಮುಖಂಡರು ಮಾತಿನ ಚಕಮಕಿ ನಡೆಸಿ ತಳ್ಳಾಟ ನೂಕಾಟ ಸಹ ನಡೆದಿದೆ. ರಾಮನಾಥ್ ಕೋವಿಂದ್ ಅವರ ಭೇಟಿಗೆ ನಮಗೆ ಅವಕಾಶ ನೀಡಲಿಲ್ಲ. ಹೂಗುಚ್ಚ ಕೊಡಲೂ ಸಹ ಻ವಕಾಶ ಕೊಡಲಿಲ್ಲ ಎಂದು ಕಿಡಿ ಕಾರಿದರು. ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಅರವಿಂದ ಲಿಂಬಾವಳಿ, ರಾಮನಾಥ್ ಕೋವಿಂದ್ ತೆರಳಬೇಕಿದ್ದ ವಿಮಾನದ ಸಮಯ ವ್ಯತ್ಯಾಸವಾಗಿದ್ದರಿಂದ ಬಹು ಬೇಗ ಹೊರಡಬೇಕಾಯ್ತು. ಕೋವಿಂದ್ ಅವರೇ ಹೇಳಿದ್ದರಿಂದ ಭೇಟಿಗೆ ಅವಕಾಶ ನೀಡಿಲ್ಲ. ಭೇಟಿಗೆ ಅವಕಾಶ ಸಿಗಲಿಲ್ಲವೆಂದು ನಿರಾಸೆಗೊಂಡು ಈ ರೀತಿ ವರ್ತಿಸಿದ್ದಾರೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments