ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆ ಯತ್ನ..?

Webdunia
ಬುಧವಾರ, 5 ಜುಲೈ 2017 (17:14 IST)
ಬೆಂಗಳೂರಿನ ಏಟ್ರಿಯಾ ಹೋಟೆಲ್`ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಎನ್`ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದರು. ಕೋವಿಂದ್ ಕೋಲಿ ಸಮಾಜಕ್ಕೆಸೇರಿದವರಾಗಿರುವುದರಿಂದ ಕೋವಿಂದ್ ಅವರನ್ನ ಭೇಟಿ ಮಾಡಲು ಕೋಲಿ ಸಮಾಜದ ಮುಖಂಡರು ಆಗಮಿಸಿದ್ದರು. ಆದರೆ, ಕೋಲಿ ಸಮಾಜದ ಮುಖಂಡರ ಭೇಟಿಗೆ ಅವಕಾಶ ನೀಡಲಿಲ್ಲ ಎಂದು ಕೋಲಿ ಸಮಾಜದ ಮುಖಂಡರು ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅರವಿಂದ ಲಿಂಬಾವಳಿ ಜೊತೆ ಕೋಲಿ ಸಮಾಜದ ಮುಖಂಡರು ಮಾತಿನ ಚಕಮಕಿ ನಡೆಸಿ ತಳ್ಳಾಟ ನೂಕಾಟ ಸಹ ನಡೆದಿದೆ. ರಾಮನಾಥ್ ಕೋವಿಂದ್ ಅವರ ಭೇಟಿಗೆ ನಮಗೆ ಅವಕಾಶ ನೀಡಲಿಲ್ಲ. ಹೂಗುಚ್ಚ ಕೊಡಲೂ ಸಹ ಻ವಕಾಶ ಕೊಡಲಿಲ್ಲ ಎಂದು ಕಿಡಿ ಕಾರಿದರು. ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಅರವಿಂದ ಲಿಂಬಾವಳಿ, ರಾಮನಾಥ್ ಕೋವಿಂದ್ ತೆರಳಬೇಕಿದ್ದ ವಿಮಾನದ ಸಮಯ ವ್ಯತ್ಯಾಸವಾಗಿದ್ದರಿಂದ ಬಹು ಬೇಗ ಹೊರಡಬೇಕಾಯ್ತು. ಕೋವಿಂದ್ ಅವರೇ ಹೇಳಿದ್ದರಿಂದ ಭೇಟಿಗೆ ಅವಕಾಶ ನೀಡಿಲ್ಲ. ಭೇಟಿಗೆ ಅವಕಾಶ ಸಿಗಲಿಲ್ಲವೆಂದು ನಿರಾಸೆಗೊಂಡು ಈ ರೀತಿ ವರ್ತಿಸಿದ್ದಾರೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments