ಕೊಳ್ಳೇಗಾಲ: ಬದುಕಿರುವಾಗಲೇ ಶವಸಂಸ್ಕಾರದ ದೃಢೀಕರಣ ಪತ್ರ ನೀಡಿದ ನಗರಸಭೆ

Sampriya
ಶುಕ್ರವಾರ, 8 ನವೆಂಬರ್ 2024 (17:08 IST)
Photo Courtesy X
ಚಾಮರಾಜನಗರ: ಬದುಕಿರುವ  ವ್ಯಕ್ತಿಯನ್ನೇ ಶವಸಂಸ್ಕಾರ ಮಾಡಲಾಗಿದೆ ಎಂದು ದೃಢೀಕರಣ ಪತ್ರಕೊಟ್ಟು ಕೊಳ್ಳೇಗಾಲ ನಗರಸಭೆ ಎಡವಟ್ಟು ಮಾಡಿದೆ.

ನಿಧನರಾಗಿದ್ದ ತಾಯಿಯ ಶವಸಂಸ್ಕಾರದ ದೃಢೀಕರಣ ಪತ್ರಕ್ಕಾಗಿ ಶಂಕರ್ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ತಾಯಿಯ ಶವಸಂಸ್ಕಾರದ ದೃಢೀಕರಣ ಪತ್ರವನ್ನು ನೀಡುವ ಬದಲು ಶಂಕರ್ ಅವರ ಶವಸಂಸ್ಕಾರ ನೆರವೇರಿಸಲಾಗಿದೆ ಎಂದು ನಗರಸಭೆ ಅಧಿಕಾರಿಗಳು ದೃಢೀಕರಣ ಪತ್ರ ನೀಡಿದ್ದಾರೆ.

ಕೊಳ್ಳೇಗಾಲ ಕುರುಬರ ಬೀದಿಯ ನಿವಾಸಿಯಾಗಿರುವ ಶಂಕರ್ ಅವರ ಪುಟ್ಟಮ್ಮ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದರು. ಅ.27 ರಂದು ಕೊಳ್ಳೇಗಾಲಕ್ಕೆ ತಂದು ಶವಸಂಸ್ಕಾರ ಮಾಡಲಾಗಿತ್ತು. ಈ ಬಗ್ಗೆ ದೃಢೀಕರಣ ಪತ್ರಕ್ಕಾಗಿ ಪುಟ್ಟಮ್ಮ ಅವರ ಪುತ್ರ ಶಂಕರ್ ಅರ್ಜಿ ಸಲ್ಲಿಸಿದ್ದರು.

ನಿಧನರಾದ ತಾಯಿಯ ಆಧಾರ್ ಕಾರ್ಡ್ ಸಹ ನೀಡಿದ್ದರು. ಆದರೆ, ಶಂಕರ್ ಅವರ ಶವಸಂಸ್ಕಾರ ಮಾಡಲಾಗಿದೆ ಎಂದು ನಗರಸಭೆ ಅಧಿಕಾರಿಗಳು ದೃಢೀಕರಣ ಪತ್ರ ನೀಡಿದ್ದಾರೆ. ತಮ್ಮ ಶವಸಂಸ್ಕಾರ ಎಂದು ಉಲ್ಲೇಖಿಸಿರುವ ದೃಢೀಕರಣ ಪತ್ರ ನೋಡಿ ವ್ಯಕ್ತಿ ಶಾಕ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments