Webdunia - Bharat's app for daily news and videos

Install App

ರಾಹುಲ್ ಗಾಂಧಿಗಾಗಿ ತೆರಿಗೆ ದುಡ್ಡು ಪೋಲಾದರೂ ‘ನಾಟ್ ಎ ಬಿಗ್ ಮ್ಯಾಟರ್’ ಎಂದ ಸಚಿವ!

Webdunia
ಬುಧವಾರ, 7 ಫೆಬ್ರವರಿ 2018 (08:40 IST)
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿರುವ ಹಿನ್ನಲೆಯಲ್ಲಿ ಕೊಪ್ಪಳದ ಸರ್ಕ್ಯೂಟ್ ಹೌಸ್ ನವೀಕರಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ 25 ಲಕ್ಷ ಖರ್ಚು ಮಾಡುತ್ತಿರುವುದು ದೊಡ್ಡ ವಿಷಯವಲ್ಲ ಎಂದಿದ್ದಾರೆ.
 

ಈ ಬಗ್ಗೆ ವರದಿ ಪ್ರಸಾರ ಮಾಡಿರುವ ಖಾಸಗಿ ವಾಹಿನಿ ಕೊಪ್ಪಳದ ಸರ್ಕ್ಯೂಟ್ ಹೌಸ್ ಇತ್ತೀಚೆಗಷ್ಟೇ ಉದ್ಘಾಟನೆಯಾಗಿದೆ. ಉದ್ಘಾಟನೆಯಾದ ಬಳಿಕ ಯಾವುದೇ ನಾಯಕರು ಇಲ್ಲಿ ತಂಗಿಲ್ಲ. ಹಾಗಿದ್ದರೂ ರಾಹುಲ್ ಗಾಂಧಿ ವಾಸ್ತವ್ಯದ ಹಿನ್ನಲೆಯಲ್ಲಿ ಮತ್ತೆ 25 ಲಕ್ಷ ರೂ. ವೆಚ್ಚ ಮಾಡುತ್ತಿದೆ ಎಂದಿದೆ.

ಅಷ್ಟೇ ಅಲ್ಲ, ಈ ಬಗ್ಗೆ ಪ್ರಶ್ನಿಸಿದರೆ, ಇಲ್ಲಿ ಗೀಜರ್, ಎಸಿ ಇರಲಿಲ್ಲ. ಹಾಗಾಗಿ ಅದನ್ನು ಅಳವಡಿಸಲು ವೆಚ್ಚ ಮಾಡುತ್ತಿದ್ದೇವಷ್ಟೇ. ಇಟ್ ಈಸ್ ನಾಟ್ ಎ ಬಿಗ್ ಮ್ಯಾಟರ್ ಎಂದು ಸಚಿವರು ಸಮಜಾಯಿಷಿ ನೀಡಿದ್ದಾರೆ. ಹಾಗಿದ್ದರೂ ತಮ್ಮ ಪಕ್ಷದ ನಾಯಕನ ಅನುಕೂಲತೆಗಾಗಿ ಜನರ ತೆರಿಗೆ ದುಡ್ಡು ವೆಚ್ಚ ಮಾಡುತ್ತಿರುವುದು ಸರಿಯೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments