Webdunia - Bharat's app for daily news and videos

Install App

ರಾಹುಲ್ ಗಾಂಧಿಗಾಗಿ ತೆರಿಗೆ ದುಡ್ಡು ಪೋಲಾದರೂ ‘ನಾಟ್ ಎ ಬಿಗ್ ಮ್ಯಾಟರ್’ ಎಂದ ಸಚಿವ!

Webdunia
ಬುಧವಾರ, 7 ಫೆಬ್ರವರಿ 2018 (08:40 IST)
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿರುವ ಹಿನ್ನಲೆಯಲ್ಲಿ ಕೊಪ್ಪಳದ ಸರ್ಕ್ಯೂಟ್ ಹೌಸ್ ನವೀಕರಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ 25 ಲಕ್ಷ ಖರ್ಚು ಮಾಡುತ್ತಿರುವುದು ದೊಡ್ಡ ವಿಷಯವಲ್ಲ ಎಂದಿದ್ದಾರೆ.
 

ಈ ಬಗ್ಗೆ ವರದಿ ಪ್ರಸಾರ ಮಾಡಿರುವ ಖಾಸಗಿ ವಾಹಿನಿ ಕೊಪ್ಪಳದ ಸರ್ಕ್ಯೂಟ್ ಹೌಸ್ ಇತ್ತೀಚೆಗಷ್ಟೇ ಉದ್ಘಾಟನೆಯಾಗಿದೆ. ಉದ್ಘಾಟನೆಯಾದ ಬಳಿಕ ಯಾವುದೇ ನಾಯಕರು ಇಲ್ಲಿ ತಂಗಿಲ್ಲ. ಹಾಗಿದ್ದರೂ ರಾಹುಲ್ ಗಾಂಧಿ ವಾಸ್ತವ್ಯದ ಹಿನ್ನಲೆಯಲ್ಲಿ ಮತ್ತೆ 25 ಲಕ್ಷ ರೂ. ವೆಚ್ಚ ಮಾಡುತ್ತಿದೆ ಎಂದಿದೆ.

ಅಷ್ಟೇ ಅಲ್ಲ, ಈ ಬಗ್ಗೆ ಪ್ರಶ್ನಿಸಿದರೆ, ಇಲ್ಲಿ ಗೀಜರ್, ಎಸಿ ಇರಲಿಲ್ಲ. ಹಾಗಾಗಿ ಅದನ್ನು ಅಳವಡಿಸಲು ವೆಚ್ಚ ಮಾಡುತ್ತಿದ್ದೇವಷ್ಟೇ. ಇಟ್ ಈಸ್ ನಾಟ್ ಎ ಬಿಗ್ ಮ್ಯಾಟರ್ ಎಂದು ಸಚಿವರು ಸಮಜಾಯಿಷಿ ನೀಡಿದ್ದಾರೆ. ಹಾಗಿದ್ದರೂ ತಮ್ಮ ಪಕ್ಷದ ನಾಯಕನ ಅನುಕೂಲತೆಗಾಗಿ ಜನರ ತೆರಿಗೆ ದುಡ್ಡು ವೆಚ್ಚ ಮಾಡುತ್ತಿರುವುದು ಸರಿಯೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments