Webdunia - Bharat's app for daily news and videos

Install App

ಹೊಲದಿಂದ ಹಿಂತಿರುಗುತ್ತಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

Webdunia
ಬುಧವಾರ, 23 ಜುಲೈ 2014 (09:09 IST)
ಉತ್ತರಪ್ರದೇಶದಂತೆ ರಾಜ್ಯದಲ್ಲಿಯೂ ಅತ್ಯಾಚಾರಗಳ ಸರಣಿ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ದಿನೇ ದಿನೇ ಹೊಸ ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,  ಹೊಲದ ಕೆಲಸ ಮಾಡಿಕೊಂಡು ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಯೊಬ್ಬಳನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ದಾಖಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಿರಾಳಕಲ್ಗುಡಿ ಕ್ಯಾಂಪ್‌ನಲ್ಲಿ ನಡೆದ ಈ ಅಮಾನುಷ ಘಟನೆಯಲ್ಲಿ ಆರೋಪಿ ಮುದುಕಪ್ಪ ನವಳಿ ಎಂಬಾತ ಹೊಲದಿಂದ ಮನೆಯ ಕಡೆ ಹೊರಟಿದ್ದ  ಹದಿಹರೆಯದ ಬಾಲಕಿಯ ಮೇಲೆ ಎರಗಿ ರೇಪ್ ಎಸಗಿದ್ದಾನೆ. 
 
ಕುಕೃತ್ಯದ ನಡೆದ ನಂತರ ಮನೆಗೆ ಬಂದ ಹುಡುಗಿ ಎಲ್ಲವನ್ನು ತನ್ನ ಪಾಲಕರಿಗೆ ತಿಳಿಸಿದ್ದಾಳೆ. ತಕ್ಷಣ ಪೋಲಿಸರಿಗೆ ದೂರು ನೀಡಲಾಯಿತು. ಪರಾರಿಯಾಗಿದ್ದ ಆರೋಪಿಯನ್ನು ಕೇವಲ 2 ಘಂಟೆಯಲ್ಲಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. 
 
ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದ್ದು, ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments