Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಭಟನೆ

Kota Srinivas Poojari

Krishnaveni K

ಬೆಂಗಳೂರು , ಸೋಮವಾರ, 29 ಜುಲೈ 2024 (15:02 IST)
ಬೆಂಗಳೂರು: ತಮ್ಮ ವಿರುದ್ಧ ಹಗರಣದ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ 40 ಹಗರಣಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಈ ಪೈಕಿ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧವೂ ಹಗರಣ ನಡೆಸಿದ ಆರೋಪ ಮಾಡಿದ್ದರು. ಆಗಲೇ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಕ್ಷಣವೇ ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಹಿಂಪಡೆಯಬೇಕು ಇಲ್ಲವೇ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದ್ದರು.

ಒಂದು ವೇಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಹಿಂಪಡೆದು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಕೋಟ ಶ್ರೀನವಾಸ್ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಸಿಎಂ ಸಿದ್ದರಾಮಯ್ಯ ಆರೋಪ ಹಿಂಪಡೆಯದ ಕಾರಣ ಇಂದು ವಿಧಾನಸೌಧದ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ನನ್ನ ಮೇಲಿನ ಆರೋಪ ಹಿಂಪಡೆಯಿರಿ ಇಲ್ಲವೇ ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಭಿತ್ತಿ ಪತ್ರ ಪಡೆದು ಪ್ರತಿಭಟನೆ ನಡೆಸಿದರು. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಪ್ರಾಮಾಣಿಕ ರಾಜಕಾರಣಿ ಎಂದು ಹೆಸರು ಮಾಡಿರುವ ಶ್ರೀನಿವಾಸ್ ಪೂಜಾರಿ ತಮ್ಮ ವಿರುದ್ಧ ಮಾಡಿರುವ ಆರೋಪದ ವಿರುದ್ಧ ಸಿಡಿದೆದ್ದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಲಾರಿ ಹೋಟೆಲ್ ನಲ್ಲಿ ಸಾಮಾನ್ಯರಂತೆ ತಿಂಡಿ ಸವಿದ ಸಿದ್ದರಾಮಯ್ಯ