Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಭಟನೆ

Krishnaveni K
ಸೋಮವಾರ, 29 ಜುಲೈ 2024 (15:02 IST)
ಬೆಂಗಳೂರು: ತಮ್ಮ ವಿರುದ್ಧ ಹಗರಣದ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ 40 ಹಗರಣಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಈ ಪೈಕಿ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧವೂ ಹಗರಣ ನಡೆಸಿದ ಆರೋಪ ಮಾಡಿದ್ದರು. ಆಗಲೇ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಕ್ಷಣವೇ ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಹಿಂಪಡೆಯಬೇಕು ಇಲ್ಲವೇ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದ್ದರು.

ಒಂದು ವೇಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಹಿಂಪಡೆದು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಕೋಟ ಶ್ರೀನವಾಸ್ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಸಿಎಂ ಸಿದ್ದರಾಮಯ್ಯ ಆರೋಪ ಹಿಂಪಡೆಯದ ಕಾರಣ ಇಂದು ವಿಧಾನಸೌಧದ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ನನ್ನ ಮೇಲಿನ ಆರೋಪ ಹಿಂಪಡೆಯಿರಿ ಇಲ್ಲವೇ ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಭಿತ್ತಿ ಪತ್ರ ಪಡೆದು ಪ್ರತಿಭಟನೆ ನಡೆಸಿದರು. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಪ್ರಾಮಾಣಿಕ ರಾಜಕಾರಣಿ ಎಂದು ಹೆಸರು ಮಾಡಿರುವ ಶ್ರೀನಿವಾಸ್ ಪೂಜಾರಿ ತಮ್ಮ ವಿರುದ್ಧ ಮಾಡಿರುವ ಆರೋಪದ ವಿರುದ್ಧ ಸಿಡಿದೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments