Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಭಟನೆ

Krishnaveni K
ಸೋಮವಾರ, 29 ಜುಲೈ 2024 (15:02 IST)
ಬೆಂಗಳೂರು: ತಮ್ಮ ವಿರುದ್ಧ ಹಗರಣದ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ 40 ಹಗರಣಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಈ ಪೈಕಿ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧವೂ ಹಗರಣ ನಡೆಸಿದ ಆರೋಪ ಮಾಡಿದ್ದರು. ಆಗಲೇ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಕ್ಷಣವೇ ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಹಿಂಪಡೆಯಬೇಕು ಇಲ್ಲವೇ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದ್ದರು.

ಒಂದು ವೇಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಹಿಂಪಡೆದು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಕೋಟ ಶ್ರೀನವಾಸ್ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಸಿಎಂ ಸಿದ್ದರಾಮಯ್ಯ ಆರೋಪ ಹಿಂಪಡೆಯದ ಕಾರಣ ಇಂದು ವಿಧಾನಸೌಧದ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ನನ್ನ ಮೇಲಿನ ಆರೋಪ ಹಿಂಪಡೆಯಿರಿ ಇಲ್ಲವೇ ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಭಿತ್ತಿ ಪತ್ರ ಪಡೆದು ಪ್ರತಿಭಟನೆ ನಡೆಸಿದರು. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಪ್ರಾಮಾಣಿಕ ರಾಜಕಾರಣಿ ಎಂದು ಹೆಸರು ಮಾಡಿರುವ ಶ್ರೀನಿವಾಸ್ ಪೂಜಾರಿ ತಮ್ಮ ವಿರುದ್ಧ ಮಾಡಿರುವ ಆರೋಪದ ವಿರುದ್ಧ ಸಿಡಿದೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments