Webdunia - Bharat's app for daily news and videos

Install App

ಬಡವರ ಪರ ನಿಂತ ಕೋಟ ಶ್ರೀನಿವಾಸ ಪೂಜಾರಿ

Webdunia
ಭಾನುವಾರ, 14 ಅಕ್ಟೋಬರ್ 2018 (15:42 IST)
ಸರ್ಕಾರಿ ಜಾಗದಲ್ಲಿ ಕೂತವರ ಮನೆ ತೆರವಿಗೆ ಆದೇಶ ಹಿನ್ನೆಲೆಯಲ್ಲಿ ಮನೆ ಒಡೆದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಡ ಕುಟುಂಬಗಳು ಕಣ್ಣೀರಿಟ್ಟಿವೆ.

ಉಡುಪಿ ಜಿಲ್ಲೆ ಕುಂದಾಪುರದ ಕಾಳಾವರ ದೇವಸ್ಥಾನ ಬೆಟ್ಟುವಿನಲ್ಲಿನ ಮನೆಗಳು ಇವಾಗಿವೆ. ಆದೇಶದಿಂದಾಗಿ ಬಡ ಕುಟುಂಬಗಳು ಕಂಗಾಲಾಗಿವೆ. ನಿವೇಶನ ರಹಿತರ ಏಳು ಮನೆಗಳು ಇವಾಗಿದ್ದು, ಮನೆ ಒಡೆದರೆ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ ನೀಡಲಾಗಿದೆ.

ನಮ್ಮನ್ನು ಕೊಂದು ಬಳಿಕ ಮನೆ ಕೆಡವಿ ಎಂದು ಕುಟುಂಬದವರು ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಬಡ ಕುಟುಂಬಗಳು, ತಮ್ಮ ಮನವಿ ಪುರಸ್ಕರಿಸುವಂತೆ ಕೋರಿದ್ದಾರೆ. ಹೀಗಾಗಿ ಬಡವರ ಪರವಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಂತಿದ್ದಾರೆ.  ಬಡವರ ಮನೆ ಮುಟ್ಟಿದ್ರೆ ಸುಮ್ಮನಿರಲ್ಲ ಎಂದಿರುವ ಕೋಟ, ಜಿಲ್ಲೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್ ಆಗಿದೆ.

ಸರಕಾರ ಆಡಳಿತ ನಡೆಸ್ತಿಲ್ಲ, ಅಧಿಕಾರಿಗಳೇ ನಡೆಸ್ತಿದ್ದಾರೆ. ಈ ಅವ್ಯವಸ್ಥೆ ಬಗ್ಗೆ ಸಿಎಂಗೆ ಪ್ರಶ್ನಿಸುವೆ ಎಂದಿದ್ದಾರೆ. ಅಧಿಕಾರಿಗಳಿಗೆ ಕೊಡುವಲ್ಲಿ ಉತ್ತರ ಕೊಡುತ್ತೇವೆ ಎಂದೂ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments