Select Your Language

Notifications

webdunia
webdunia
webdunia
webdunia

ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ

ಕೊಟ್ಟೂರೇಶ್ವರ ಸ್ವಾಮಿ  ರಥೋತ್ಸವ ಸಂಭ್ರಮ
ಅರಸೀಕೆರೆ , ಶನಿವಾರ, 23 ಫೆಬ್ರವರಿ 2019 (15:45 IST)
ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವ ಸಡಗರದಿಂದ ನಡೆಯಿತು.

ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಹಿರೇ ಸಾದರಹಳ್ಳಿ ಸಮೀಪದ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಭಕ್ತರ ಜಯಘೋಷಗಳ ನಡುವೆ ರಥೋತ್ಸವ ಅದ್ಧೂರಿಯಿಂದ ನೆರವೇರಿತು.

ಸಂಪ್ರದಾಯದಂತೆ ವ್ಯಾಸ ಹುಣ್ಣಿಮೆಯಂದು ನಡೆಯುವ ಗುರು ಕೊಟ್ಟೂರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ವಿವಿಧ ಭಾಗಗಳಿಂದ ಅಪಾರ ಭಕ್ತರು ಬರುತ್ತಾರೆ.  ಗುರು ಕೊಟ್ಟೂರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ, ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.  ಮಹಾರಥದ ಚಕ್ರಗಳಿಗೆ ಸಂಪ್ರದಾಯದಂತೆ ಪೂಜಾಕಾರ್ಯ ಶಾಸ್ತ್ರೋಕ್ತವಾಗಿ ಪೂರ್ಣಗೊಳಿಸಿ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.




Share this Story:

Follow Webdunia kannada

ಮುಂದಿನ ಸುದ್ದಿ

ಸೆಂಟ್ರಲ್ ನಿಂದ ಪ್ರಕಾಶ್ ರೈ ಸ್ಪರ್ಧೆ; ಸಂಸದ ಹಿಂದೇಟು ಹಾಕಿದ್ದು ಏಕೆ?