Select Your Language

Notifications

webdunia
webdunia
webdunia
webdunia

ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ : ಸುಧಾಕರ್

ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ : ಸುಧಾಕರ್
ಬೆಂಗಳೂರು , ಶುಕ್ರವಾರ, 17 ಜೂನ್ 2022 (08:46 IST)
ಬೆಂಗಳೂರು : ಕಾಂಗ್ರೆಸ್ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ನವರಿಂದ ರಾಜಭವನ ಚಲೋ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆದರೆ ಅದಕ್ಕೆ ಅವರೇ ಹೊಣೆ. ಕಾಂಗ್ರೆಸ್ನವರೇ ನೈತಿಕ ಹೊಣೆ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅವರು ಪ್ರತಿಭಟನೆ ಮಾಡುವುದಾದರೆ ಫ್ರೀಡಂಪಾರ್ಕ್ನಲ್ಲಿ ಮಾಡಲಿ, ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಅವರಿಂದು ರಾಜಭವನ ಚಲೋ ಮಾಡ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೋವಿಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿವರಿಸಿದ್ದಾರೆ.

ಇದೇ ವೇಳೆ ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಒಂದೆರಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕು ವರ್ಷದ ಮಗುವಿನ ಹುರಿದು ಮುಕ್ಕಿದ ಕಾಮ ಪಿಪಾಸುಗಳು!