Publish Date: Fri, 20 Aug 2021 (12:20 IST)
Updated Date: Fri, 20 Aug 2021 (12:22 IST)
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು.
ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 36,555 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 20) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಒಟ್ಟು 3,15,61,635 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 540 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 4,33,589 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.