Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಮಯ ಬಂದಾಗ ತೀರ್ಮಾನ ಎಂದ ಜಾರಕಿಹೊಳಿ

Sampriya
ಶನಿವಾರ, 22 ಫೆಬ್ರವರಿ 2025 (14:29 IST)
Photo Courtesy X
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಮೊದಲಿನಿಂದಲೂ ಇದ್ದಾರೆ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನು ಹೈಕಮಾಂಡ್‌ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆಯಾದರೂ ಮಾಡುತ್ತಾರೆ. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

ಮುಂದಿನ ಸುದ್ದಿ
Show comments