Webdunia - Bharat's app for daily news and videos

Install App

ಅತೃಪ್ತ ಶಾಸಕರ ವಿರುದ್ಧ ಧನಂಜಯ್ ಕುಮಾರ್ ಗರಂ: ಹೈಕಮಾಂಡ್‌ಗೆ ದೂರು

Webdunia
ಬುಧವಾರ, 29 ಜೂನ್ 2016 (14:35 IST)
ಅಧಿಕಾರವಿಲ್ಲದಾಗ ಅಧಿಕಾರಕ್ಕೆ ಬರಬೇಕು ಎಂದು ಕನಸು ಕಾಣುತ್ತೇವೆ. ಅಧಿಕಾರಕ್ಕೆ ಬಂದ ನಂತರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯರ ನಾಯಕತ್ವ ಬದಲಿಸಬೇಕು ಎಂದು ಕೇಳುವುದು ಯಾವ ನ್ಯಾಯವೆಂದು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಕುಮಾರ್ ಗುಡುಗಿದ್ದಾರೆ. 
 
 ರಾಜ್ಯ ಸರಕಾರ ಮೂರು ವರ್ಷಗಳ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಸರಕಾರದ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ. ಜನರ ಬಳಿಗೆ ತೆರಳಿ ಸರಕಾರದ ಸಾಧನೆಗಳನ್ನು ವಿವರಿಸಿ ಹೇಳುತ್ತೇವೆ ಎಂದು ತಿಳಿಸಿದ್ದಾರೆ.
 
ನಾವು ಅತೃಪ್ತರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಹೈಕಮಾಂಡ್‌ಗೆ ದೂರು ನೀಡುತ್ತೇವೆ. ಅಧಿಕಾರ ಇರುವಾಗ ಸುಮ್ಮನಿದ್ದ ಅತೃಪ್ತರು ಅಧಿಕಾರ ಹೊದ ಕೂಡಲೇ ಭಿುನ್ನಮತ ತೋರುತ್ತಿದ್ದಾರೆ. ಸಮಸ್ಯೆಗಳಿದ್ದರೆ ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಪ್ರತಿಯೊಬ್ಬರಿಗೂ ಲಕ್ಷಣ ರೇಖೆ ಇರುತ್ತದೆ. ಅದನ್ನು ಯಾರೊಬ್ಬರು ದಾಟಬಾರದು ಎಂದು ಸಲಹೆ ನೀಡಿದರು.
 
ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಧನಂಜಯ್ ಕುಮಾರ್, ಬಿಜೆಪಿಯಲ್ಲಿಯೇ ಭಿನ್ನಮತ ಕಾಡುತ್ತಿದ್ದು ಅದನ್ನು ಸರಿಪಡಿಸಿಕೊಳ್ಳುವುದು ಬಿಟ್ಟು ಕಾಂಗ್ರೆಸ್ ಪಕ್ಷದತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments