ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಮಿಷನ್ ದಂಧೆ

Webdunia
ಸೋಮವಾರ, 18 ಅಕ್ಟೋಬರ್ 2021 (21:14 IST)
ಕಾಂಗ್ರೆಸ್ ಮುಖಂಡ ಉಗ್ರಪ್ಪ ಹಾಗೂ ಸಲೀಂ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಮಿಷನ್ ದಂಧೆ ನಡೆಸುತ್ತಿದ್ದು, ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಂಭಾಷಣೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಇಬ್ಬರು ಪ್ರತ್ಯೇಕವಾಗಿ ದೂರು ನೀಡಿದ್ದಾರೆ.
`ಹೆಲ್ಪಿಂಗ್ ಸಿಟಿಜನ್ ಆ್ಯಂಡ್ ಪೀಪಲ್ಸï ಕೋರ್ಟ್' ಎನ್‍ಜಿಒ ಸಂಸ್ಥಾಪಕ ಅಲಂ ಪಾಷ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಎಸಿಬಿಗೆ ದೂರು ನೀಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಅಲಂಪಾಷ ಅವರು ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಮಾಧ್ಯಮ ಕಾರ್ಯದರ್ಶಿ ಎಂ.ಎ. ಸಲೀಂ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ 13 ಮಂದಿ ವಿರುದ್ಧ ದೂರು ನೀಡಿದ್ದಾರೆ. 
ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ಸತ್ಯಕ್ಕೆ ಹತ್ತಿರವಾಗಿದ್ದು, ಜಲಸಂಪನ್ಮೂಲ ಇಲಾಖೆ ಸಚಿವರಾಗಿz್ದÁಗ ಶಿವಕುಮಾರ್ ಭ್ರಷ್ಟಾಚಾರವೆಸಗಿದ್ದಾರೆ. ಡಿಕೆಶಿ 8 ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿz್ದÁರೆ. ಭ್ರಷ್ಟಾಚಾರದ ಮೂಲಕ 2023ರ ಚುನಾವಣೆಗಾಗಿ ಕೋಟ್ಯಂತರ ರೂ. ಸಂಪಾದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣವಾಗಿ ಗೊತ್ತಿದೆ. ಅಕ್ರಮದ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ದೂರಿನಲ್ಲಿ ಅಲಂಪಾಷ ಆರೋಪಿಸಿದ್ದಾರೆ.
ಡಿಕೆಶಿಗೆ ಬೇನಾಮಿ ಆಸ್ತಿ: 
ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಅವರು ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ನೀಡಿದ್ದಾರೆ. ಡಿಕೆಶಿ ನಡೆಸಿರುವ ಅಕ್ರಮವು ಉಗ್ರಪ್ಪ ಮತ್ತು ಸಲೀಂ ಸಂಭಾಷಣೆಯಿಂದ ತಿಳಿದು ಬಂದಿದೆ.
 ಡಿ.ಕೆ ಶಿವಕುಮಾರ್ ಶೇ 12ರಷ್ಟು ಕಮಿಷನ್ ಪಡೆಯುತ್ತಾರೆ ಎಂದಿz್ದÁರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿz್ದÁರೆ. ಚಿಕ್ಕನಾಯಕನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿz್ದÁರೆ. ಸೋಲಾರ್ ಪ್ಲಾಂಟ್‍ಗಳಲ್ಲಿ ಅಕ್ರಮ ಹಣ ಸಂಪಾದಿಸಿದ್ದಾರೆ. ಹೆಂಚಿನ ಫ್ಯಾಕ್ಟರಿ ಬೇನಾಮಿ ಹೆಸರಿನಲ್ಲಿದೆ. ಕೃಷ್ಣಮೂರ್ತಿಯ ಹೆಸರಿನಲ್ಲಿ 100 ಕೋಟಿ ಬೇನಾಮಿ ಆಸ್ತಿ ಹೊಂದಿz್ದÁರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments