ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ಗೆ ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ಗೆ ಯಾವುದೇ ಅಭ್ಯಂತರವಿಲ್ಲ ಎಂದು ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ಗೆ ಡಿಸಿಎಂ ಸ್ಥಾನ ಅಥವಾ ಸಚಿವ ಸ್ಥಾನ ನೀಡಬೇಕು ಎಂದು ಪರಮೇಶ್ವರ್ ಬೆಂಬಲಿಗರು ಹೈಕಮಾಂಡ್ ಮೇಲೆ ನಿರಂತರ ಒತ್ತಡ ಹೇರಿದ್ದರು.
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದರಿಂದ, ಸಚಿವ ಸಂಪುಟ ವಿಸ್ತರಣೆಯಾಗಬೇಕು ಎಂದು ಶಾಸಕರು ಹೈಕಮಾಂಡ್ಗೆ ಒತ್ತಾಯಿಸಿದ್ದರು.
ಇದೀಗ ಸಚಿವ ಸಂಪುಟ ವಿಸ್ತರಣೆಗೆ ಚಾಲನೆ ದೊರೆತಿದ್ದು, ಜಿ.ಪರಮೇಶ್ವರ್ಗೆ ಡಿಸಿಎಂ ಪಟ್ಟ ದೊರೆಯುವುದು ಬಹುತೇಕ ಖಚಿತವಾಗಿದೆ.
ಉಪಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿರುವುದಕ್ಕೆ ರಾಜ್ಯ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ.