Webdunia - Bharat's app for daily news and videos

Install App

ಶೀಘ್ರದಲ್ಲೇ ಕೆಪಿಸಿಸಿ ಪುನಾರಚನೆ

Webdunia
ಬುಧವಾರ, 13 ಅಕ್ಟೋಬರ್ 2021 (09:21 IST)
ಬೆಂಗಳೂರು : ಹಲವು ತಿಂಗಳುಗಳಿಂದ ನಡೆಯುತ್ತಿರುವ ಕೆಪಿಸಿಸಿ ಪುನಾರಚನೆ ಕುರಿತ ಕಸರತ್ತುಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಕ್ಟೋಬರ್ 19 ಮತ್ತು 20 ರಂದು ರಾಜ್ಯಕ್ಕೆ ಬರುವ ನಿರೀಕ್ಷೆಯಿದ್ದು, ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಸಿಂದಗಿ ಹಾಗೂ ಹಾನಗಲ್ ಚುನಾವಣೆ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭವನ್ನೇ ಬಳಸಿಕೊಂಡು ಪಕ್ಷ ಕಟ್ಟಲು ಶ್ರಮಿಸುತ್ತಿರುವವರು, ಪ್ರಮಾಣಿಕರು ಹಾಗೂ ಪಕ್ಷಕ್ಕಾಗಿ ತಮ್ಮ ಸಾಕಷ್ಟು ಸಮಯವನ್ನು ಕಳೆಯುತ್ತಿರುವವರನ್ನು ಸುರ್ಜೇವಾಲಾ ಅವರು ಗಮನಿಸಲಿದ್ದಾರೆ. ಬಳಿಕ ಶ್ರಮದಾಯಿಗಳಾಗಿರುವ ನಾಯಕರಿಗೆ ಜವಾಬ್ದಾರಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಈ ನಡುವೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ವಿವಿಧ ಹುದ್ದೆಗಳಿಗೆ ಶಿಫಾರಸು ಮಾಡಿರುವ ಪಟ್ಟಿ ದೊಡ್ಡದಾಗಿಯೇ ಇದ್ದು, ಇಬ್ಬರು ನಾಯಕರು ನೀಡುರುವ ಈ ಪಟ್ಟಿ ಇದೀಗ ಹೈಕಮಾಂಡ್'ನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇಬ್ಬರೂ ನಾಯಕರು ಬಹಳ ಹಿಂದೆಯೇ ಈ ಪಟ್ಟಿಯನ್ನು ಹೈಕಮಾಂಡ್'ಗೆ ನೀಡಿದ್ದು, ಇತ್ತೀಚೆಗೆ ದೆಹಲಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಕುರಿತು ಕೇಂದ್ರದ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದೀಗ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಶ್ರಮದ ಆಧಾರದ ಮೇಲೆ ನಾಯಕರ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಇದು ಹೈಕಮಾಂಡ್ ನೀಡಿರುವ ನಿರ್ದೇಶನವಾಗಿದೆ. ಹೊಣೆಗಾರಿಕೆಯನ್ನು ಪರಿಶೀಲಿಸುತ್ತಾರೆ. ಬಳಿಕ ಯಾವ ನಾಯಕರನ್ನು ಆಯ್ಕೆ ಮಾಡಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments