Webdunia - Bharat's app for daily news and videos

Install App

ಶೀಘ್ರದಲ್ಲೇ ಕೆಪಿಸಿಸಿ ಪುನಾರಚನೆ

Webdunia
ಬುಧವಾರ, 13 ಅಕ್ಟೋಬರ್ 2021 (09:21 IST)
ಬೆಂಗಳೂರು : ಹಲವು ತಿಂಗಳುಗಳಿಂದ ನಡೆಯುತ್ತಿರುವ ಕೆಪಿಸಿಸಿ ಪುನಾರಚನೆ ಕುರಿತ ಕಸರತ್ತುಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಕ್ಟೋಬರ್ 19 ಮತ್ತು 20 ರಂದು ರಾಜ್ಯಕ್ಕೆ ಬರುವ ನಿರೀಕ್ಷೆಯಿದ್ದು, ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಸಿಂದಗಿ ಹಾಗೂ ಹಾನಗಲ್ ಚುನಾವಣೆ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭವನ್ನೇ ಬಳಸಿಕೊಂಡು ಪಕ್ಷ ಕಟ್ಟಲು ಶ್ರಮಿಸುತ್ತಿರುವವರು, ಪ್ರಮಾಣಿಕರು ಹಾಗೂ ಪಕ್ಷಕ್ಕಾಗಿ ತಮ್ಮ ಸಾಕಷ್ಟು ಸಮಯವನ್ನು ಕಳೆಯುತ್ತಿರುವವರನ್ನು ಸುರ್ಜೇವಾಲಾ ಅವರು ಗಮನಿಸಲಿದ್ದಾರೆ. ಬಳಿಕ ಶ್ರಮದಾಯಿಗಳಾಗಿರುವ ನಾಯಕರಿಗೆ ಜವಾಬ್ದಾರಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಈ ನಡುವೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ವಿವಿಧ ಹುದ್ದೆಗಳಿಗೆ ಶಿಫಾರಸು ಮಾಡಿರುವ ಪಟ್ಟಿ ದೊಡ್ಡದಾಗಿಯೇ ಇದ್ದು, ಇಬ್ಬರು ನಾಯಕರು ನೀಡುರುವ ಈ ಪಟ್ಟಿ ಇದೀಗ ಹೈಕಮಾಂಡ್'ನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇಬ್ಬರೂ ನಾಯಕರು ಬಹಳ ಹಿಂದೆಯೇ ಈ ಪಟ್ಟಿಯನ್ನು ಹೈಕಮಾಂಡ್'ಗೆ ನೀಡಿದ್ದು, ಇತ್ತೀಚೆಗೆ ದೆಹಲಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಕುರಿತು ಕೇಂದ್ರದ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದೀಗ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಶ್ರಮದ ಆಧಾರದ ಮೇಲೆ ನಾಯಕರ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಇದು ಹೈಕಮಾಂಡ್ ನೀಡಿರುವ ನಿರ್ದೇಶನವಾಗಿದೆ. ಹೊಣೆಗಾರಿಕೆಯನ್ನು ಪರಿಶೀಲಿಸುತ್ತಾರೆ. ಬಳಿಕ ಯಾವ ನಾಯಕರನ್ನು ಆಯ್ಕೆ ಮಾಡಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments