Webdunia - Bharat's app for daily news and videos

Install App

ಆರ್ ಎಸ್ಎಸ್ ನವರೇ ಮುಸ್ಲಿಮರಂತೆ ಬಂದು ಮೈಸೂರಲ್ಲಿ ಗಲಾಟೆ ಮಾಡಿದಾರೆ: ಕಾಂಗ್ರೆಸ್ ನಾಯಕ ಲಕ್ಷ್ಮಣ್

Krishnaveni K
ಬುಧವಾರ, 12 ಫೆಬ್ರವರಿ 2025 (09:45 IST)
Photo Credit: X
ಮೈಸೂರು: ನಿನ್ನೆ ಮೈಸೂರಿನಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದರಿಂದ ರೊಚ್ಚಿಗೆದ್ದು ಮುಸ್ಲಿಮ್ ಯುವಕರ ಗುಂಪು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿತ್ತು. ಆದರೆ ಇವರೆಲ್ಲಾ ಮುಸ್ಲಿಮರಲ್ಲ, ಅವರ ವೇಷ ಹಾಕಿಕೊಂಡು ಬಂದು ಆರ್ ಎಸ್ಎಸ್ ನವರೇ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಧರ್ಮಗುರುಗಳ ಬಗ್ಗೆ ಸುರೇಶ್ ಎಂಬಾತ ಅವಹೇಳನಕಾರೀ ಪೋಸ್ಟ್ ಮಾಡಿದ್ದಾನೆಂದು ರೊಚ್ಚಿಗೆದ್ದ ಯುವಕರ ಗುಂಪು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ಎಸೆದು ದಾಂಧಲೆ ನಡೆಸಿತ್ತು. ಇಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಸುರೇಶ್ ನನ್ನು ಬಂಧಿಸಿಟ್ಟಿದ್ದರು.

ಘಟನೆ ಈಗ ರಾಜಕೀಯ ತಿರುವು ಪಡೆದಿದೆ. ಇದೆಲ್ಲಾ ಮುಸ್ಲಿಮರ ಓಲೈಕೆಯ ಪರಿಣಾಮ ಎಂದು ಬಿಜೆಪಿ ಆರೋಪಿಸಿದರೆ ಇತ್ತ ಕಾಂಗ್ರೆಸ್ ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಎಂದು ತಿರುಗೇಟು ನೀಡಿದೆ. ಆದರೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಲ್ಲಿ ಗಲಾಟೆ ಮಾಡಿದವರು ಮುಸ್ಲಿಮರೇ ಅಲ್ಲ. ಆರ್ ಎಸ್ಎಸ್ ನವರೇ ಸುಮಾರು 300 ಮಂದಿ ಒಟ್ಟು ಸೇರಿಸಿ ಮುಸ್ಲಿಮರ ವೇಷದಲ್ಲಿ ಬಂದು ಗಲಾಟೆ ಎಬ್ಬಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಈ ಹೇಳಿಕೆಗೆ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪೋಸ್ಟ್ ಹಾಕಿದ ಕಿಡಿಗೇಡಿಗೂ ಆರ್ ಎಸ್ಎಸ್ ಕಾರ್ಯಕರ್ತ ಪಟ್ಟ ಕಟ್ಟಲಾಗಿದೆ. ಈಗ ಅಷ್ಟೊಂದು ಸಂಖ್ಯೆಯಲ್ಲಿ ಸೇರಿದ್ದವರೂ ಆರ್ ಎಸ್ಎಸ್ ನವರು ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದೀರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments