Webdunia - Bharat's app for daily news and videos

Install App

ಆರ್ ಎಸ್ಎಸ್ ನವರೇ ಮುಸ್ಲಿಮರಂತೆ ಬಂದು ಮೈಸೂರಲ್ಲಿ ಗಲಾಟೆ ಮಾಡಿದಾರೆ: ಕಾಂಗ್ರೆಸ್ ನಾಯಕ ಲಕ್ಷ್ಮಣ್

Krishnaveni K
ಬುಧವಾರ, 12 ಫೆಬ್ರವರಿ 2025 (09:45 IST)
Photo Credit: X
ಮೈಸೂರು: ನಿನ್ನೆ ಮೈಸೂರಿನಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದರಿಂದ ರೊಚ್ಚಿಗೆದ್ದು ಮುಸ್ಲಿಮ್ ಯುವಕರ ಗುಂಪು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿತ್ತು. ಆದರೆ ಇವರೆಲ್ಲಾ ಮುಸ್ಲಿಮರಲ್ಲ, ಅವರ ವೇಷ ಹಾಕಿಕೊಂಡು ಬಂದು ಆರ್ ಎಸ್ಎಸ್ ನವರೇ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಧರ್ಮಗುರುಗಳ ಬಗ್ಗೆ ಸುರೇಶ್ ಎಂಬಾತ ಅವಹೇಳನಕಾರೀ ಪೋಸ್ಟ್ ಮಾಡಿದ್ದಾನೆಂದು ರೊಚ್ಚಿಗೆದ್ದ ಯುವಕರ ಗುಂಪು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ಎಸೆದು ದಾಂಧಲೆ ನಡೆಸಿತ್ತು. ಇಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಸುರೇಶ್ ನನ್ನು ಬಂಧಿಸಿಟ್ಟಿದ್ದರು.

ಘಟನೆ ಈಗ ರಾಜಕೀಯ ತಿರುವು ಪಡೆದಿದೆ. ಇದೆಲ್ಲಾ ಮುಸ್ಲಿಮರ ಓಲೈಕೆಯ ಪರಿಣಾಮ ಎಂದು ಬಿಜೆಪಿ ಆರೋಪಿಸಿದರೆ ಇತ್ತ ಕಾಂಗ್ರೆಸ್ ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಎಂದು ತಿರುಗೇಟು ನೀಡಿದೆ. ಆದರೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಲ್ಲಿ ಗಲಾಟೆ ಮಾಡಿದವರು ಮುಸ್ಲಿಮರೇ ಅಲ್ಲ. ಆರ್ ಎಸ್ಎಸ್ ನವರೇ ಸುಮಾರು 300 ಮಂದಿ ಒಟ್ಟು ಸೇರಿಸಿ ಮುಸ್ಲಿಮರ ವೇಷದಲ್ಲಿ ಬಂದು ಗಲಾಟೆ ಎಬ್ಬಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಈ ಹೇಳಿಕೆಗೆ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪೋಸ್ಟ್ ಹಾಕಿದ ಕಿಡಿಗೇಡಿಗೂ ಆರ್ ಎಸ್ಎಸ್ ಕಾರ್ಯಕರ್ತ ಪಟ್ಟ ಕಟ್ಟಲಾಗಿದೆ. ಈಗ ಅಷ್ಟೊಂದು ಸಂಖ್ಯೆಯಲ್ಲಿ ಸೇರಿದ್ದವರೂ ಆರ್ ಎಸ್ಎಸ್ ನವರು ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದೀರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments