ಕೆಪಿಎಲ್ ಸೀಸನ್ 7: ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್

Webdunia
ಗುರುವಾರ, 9 ಆಗಸ್ಟ್ 2018 (18:52 IST)
ಕಾರ್ಬಲ್ ಕೆಪಿಎಲ್ 7ನೇ ಆವೃತ್ತಿಯ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್ ಆಯ್ಕೆಯಾಗಿದ್ದು, ತಂಡದ 18 ಆಟಗಾರರ ಪಟ್ಟಿಯನ್ನ ಅಧಿಕೃತವಾಗಿ ಪ್ರಕಟಿಸಲಾಯಿತು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್ ತಂಡದ ಮಾಲೀಕರಾದ ಅರ್ಜುನ್ ರಂಗ,  ತಂಡದ 18 ಆಟಗಾರರ ಪಟ್ಟಿಯನ್ನ ಪ್ರಕಟಿಸಿದರು. ಇದೇ ತಿಂಗಳ 15 ರಿಂದ ಆರಂಭಗೊಳ್ಳಲಿರುವ ಕಾರ್ಬನ್ ಕೆಪಿಎಲ್ 7ನೇ ಆವೃತ್ತಿಯ ಪಂದ್ಯಗಳು ಬೆಂಗಳೂರಿನಲ್ಲಿ ಆರಂಭಗೊಂಡು ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಅಂತ್ಯಗೊಳ್ಲಲಿದೆ. ಮೈಸೂರಿನಲ್ಲಿ ಈ ಬಾರಿ ಕೆಲವು ಲೀಗ್ ಪಂದ್ಯಗಳು ಸೇರಿದಂತೆ ಕೆಪಿಎಲ್ 7ನೇ ಆವೃತ್ತಿಯ ಫೈನಲ್ ಪಂದ್ಯ ನಗರದ ಎಸ್ ಡಿಎನ್ ಆರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕಾಗಿ ಮೈಸೂರು ವಾರಿಯರ್ಸ್ ತಂಡ ಸರ್ವ ರೀತಿಯಲ್ಲೂ ಸಿದ್ದಗೊಂಡಿದ್ದು, ಇದೇ ಮೊದಲ ಬಾರಿಗೆ ಮೈಸೂರು ವಾರಿಯರ್ಸ್ ತಂಡವನ್ನ ಐಪಿಎಲ್ ಮತ್ತು ದೇಸಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಮೈಸೂರಿನ ಜೆ.ಸುಜೀತ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಪ್ರತಿಭಾನ್ವೇಷಣೆಯ ಮೂಲಕ ಮೈಸೂರಿನ ಇಬ್ಬರು ಆಲ್ ರೌಂಡರ್ ಆಟಗಾರರಾದ ಕಿಶನ್ ಬೆಡಾರೆ ಮತ್ತು ಗೌತಮ್ ಸಾಗರ್ ಅವರನ್ನ ತಂಡಕ್ಕೆ ಇದೇ ಮೊದಲ ಬಾರಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ವಾರಿಯರ್ಸ್ ತಂಡದ ಮೆಂಟರ್ ಆಗಿ ನೇಮಕಗೊಂಡಿರುವ ಭಾರತ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ತಂಡವನ್ನ ಉತ್ತಮ ರೀತಿಯಲ್ಲಿ ಸಜ್ಜುಗೊಳಿಸಿದ್ದು, ಈ ಬಾರಿ ಮೈಸೂರು ವಾರಿಯರ್ಸ್ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments