Webdunia - Bharat's app for daily news and videos

Install App

ಕೆ. ಪಿ. ಎಸ್. ಸಿ. ಅಭ್ಯರ್ಥಿಗಳ ಪರದಾಟ

Webdunia
ಬುಧವಾರ, 8 ಡಿಸೆಂಬರ್ 2021 (18:08 IST)
ರಾಜ್ಯದ ವಿವಿಧ ಭಾಗಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದೆ. ಓಮಿಕ್ರಾನ್ ಆತಂಕದ ನಡುವೆ ನೂರಾರು ಮೈಲಿ ದೂರದಲ್ಲಿ ಪರೀಕ್ಷೆ ಬರೆಯಬೇಕಾದ ಸಂದಿಗ್ಧತೆ ಕೆಪಿಎಸ್‍ಸಿ ಆಕಾಂಕ್ಷಿಗಳಿಗೆ ಎದುರಾಗಿದೆ.ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಸುಮಾರು 60 ಸಾವಿರ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
 
ಇದೇ ತಿಂಗಳ 13 ಮತ್ತು 14ರಂದು ಎರಡು ದಿನ ನಡೆಯುವ ಕೆಪಿಎಸ್‍ಸಿ ಪರೀಕ್ಷೆಯನ್ನು ಬರೆಯಲು ತಮ್ಮ ಊರಿಂದ 500-600 ಕಿಲೋ ಮೀಟರ್ ದೂರದ ಊರಿಗೆ ಹೋಗಿ ಪರೀಕ್ಷೆ ಬರೆಯಬೇಕು. ಬಹುತೇಕ ಅಭ್ಯರ್ಥಿಗಳಿಗೆ ಪರವೂರಿನಲ್ಲಿ ಪರೀಕ್ಷಾ ಕೇಂದ್ರಗಳು ಸಿಕ್ಕಿವೆ.
 
ಕೊರೋನಾ ಹೆಚ್ಚಾಗಿರುವ ಸಮಯದಲ್ಲಿ ಈ ರೀತಿ ೀರ್ಘ ಪ್ರಯಾಣ ಮಾಡುವುದು ಎಷ್ಟು ಸರಿ ಎಂದು ಅಭ್ಯರ್ಥಿಗಳು ಹೇಳುತ್ತಾರೆ. ಅಲ್ಲದೆ ಬಹಳ ಹೊತ್ತು ಪ್ರಯಾಣ ಮಾಡಿ ಬಂದು ಎರಡು ದಿನ ಉಳಿದುಕೊಂಡು ಪರೀಕ್ಷೆ ಬರೆಯಬೇಕು.ಅಭ್ಯರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಸಿಕ್ಕಿದ್ದು ಕಳೆದ ಸೋಮವಾರವಷ್ಟೆ.ಬೆಂಗಳೂರಿನ ಯಲಹಂಕದಲ್ಲಿ ಪರೀಕ್ಷಾ ಕೇಂದ್ರವಿದೆ. 5 ಗಂಟೆ ಪ್ರಯಾಣಿಸಿ ಬೆಂಗಳೂರಿಗೆ ಬರಬೇಕು ಎಂದು ಹೇಳುತ್ತಾರೆ. ಆದರೆ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಗಟ್ಟಲು ಈ ರೀತಿ ಮಾಡಲಾಗಿದೆ ಎಂದು ಕೆಪಿಎಸ್‍ಸಿ ಅಕಾರಿಗಳು ಹೇಳುತ್ತಿದ್ದಾರೆ.
 
ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 2019ರಲ್ಲಿ ಕೆಪಿಎಸ್ ಸಿ ಪರೀಕ್ಷೆ ನಡೆದಿತ್ತು. ಕಳೆದ ಮಾರ್ಚ್ ತಿಂಗಳಲ್ಲಿ 870 ಎಂಜಿನಿಯರಿಂಗ್ ಹುದ್ದೆಗಳು, 570 ಸಹಾಯಕ ಎಂಜಿನಿಯರ್ ಮತ್ತು 300 ಜ್ಯೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಕರೆದು ಜೂನ್ 2019ರಲ್ಲಿ ಪರೀಕ್ಷೆ ನಡೆಸಲಾಯಿತು. ನಂತರ ಮರು ತಿಂಗಳು ಜುಲೈಯಲ್ಲಿ ಬಿಜೆಪಿ ಅಕಾರಕ್ಕೆ ಬಂತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments