Webdunia - Bharat's app for daily news and videos

Install App

ಕೆಪಿಎಸ್ಸಿ ಪರೀಕ್ಷೆ ಅಕ್ರಮ: ಮತ್ತೆ ಏಳು ಜನ ಅಂದರ್

Webdunia
ಶುಕ್ರವಾರ, 23 ಮಾರ್ಚ್ 2018 (17:27 IST)
ಕೆಪಿಎಸ್ ಸಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸರು ಮತ್ತೆ ಏಳು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಮೈಮುದ ನದಾಫ್, ನಾಗರಾಜ ಟೆಂಗಳಿ, ಡಾ.ಕಾಮ್ರಾನ್ ಕೈಸರ್, ಅಬ್ದುಲ್ ನಜೀಬ್, ಹಜರತ್ ಅಲಿ ನದಾಫ್, ಇಮಾಮಸಾಬ ನದಾಫ್, ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಅಭ್ಯರ್ಥಿಗಳ ಪ್ರವೇಶ ಪತ್ರ, ಸಹಿ ಇರುವ ಖಾಲಿ ಚೆಕ್, ಅಭ್ಯರ್ಥಿಗಳ ಮೂಲ ದಾಖಲಾತಿಗಳು, ಅಂಕಪಟ್ಟಿಗಳು, 5 ಲಕ್ಷ ನಗದು ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.
 
ಸರಕಾರಿ ನೌಕರರೇ ಹೆಚ್ಚು: 
 
ಬಂಧಿತರದಲ್ಲಿ ಬಹುತೇಕರು ಸರಕಾರಿ ನೌಕರರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಐವರನ್ನು ಪೊಲೀಸರು ಬಂಧಿಸಿದ್ದರು. ಸೂಕ್ಷ್ಮ ಬ್ಲೂಟೂತ್ ನಿಂದ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಮತ್ತಿತರ ಮಾರ್ಗಗಳಿಂದ ಅಕ್ರಮವನ್ನು ಪರೀಕ್ಷೆಯಲ್ಲಿ ಈ ಆರೋಪಿಗಳು ಎಸಗುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ಮೂಲಕ 100ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನೇಮಕಾತಿಯನ್ನು ಆರೋಪಿಗಳನ್ನು ಮಾಡಿಸಿದ್ದರು. ಅಕ್ರಮದಲ್ಲಿ ಪಾಲುದಾರರಾಗಿರುವ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕಲಬುರಗಿ ಎ ಉಪ ವಿಭಾಗದ ಎಎಸ್ ಪಿ ಲೋಕೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments