Webdunia - Bharat's app for daily news and videos

Install App

ಕೆಪಿಎಸ್‌ಸಿ ಮರು ಪರೀಕ್ಷೆ

Webdunia
ಭಾನುವಾರ, 19 ಡಿಸೆಂಬರ್ 2021 (14:09 IST)
ರೈಲು ವಿಳಂಬದಿಂದಾಗಿ ಡಿಸೆಂಬರ್ 14 ರಂದು ಕರ್ನಾಟಕ ಲೋಕಸೇವಾ ಆಯೋಗ( Karnataka Public Service Commission -KPSC ) ನಡೆಸಿದ ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್‌ಗಳ (PWD Assistant Engineer) ಭಾಗ-1 ಪರೀಕ್ಷೆ ತಪ್ಪಿಸಿಕೊಂಡಿದ್ದ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲು ಎರಡನೇ ಅವಕಾಶ ಸಿಕ್ಕಿದೆ.ಎರಡು ರೈಲುಗಳಲ್ಲಿ ದೂರದ ಸ್ಥಳಗಳಿಂದ ಬೆಂಗಳೂರಿಗೆ ಬಂದು ಇದೇ ರೀತಿಯ ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಸುಮಾರು 200 ಇತರ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆಯೇ ಎಂಬುದರ ಬಗ್ಗೆ KPSC ಇನ್ನೂ ತಿಳಿಸಿಲ್ಲ.
 
ಈ ಅಭ್ಯರ್ಥಿಗಳು ಕಲಬುರಗಿ, ಬೀದರ್, ರಾಯಚೂರು ಮತ್ತು ಸೇಡಂ ಕಡೆಯಿಂದ ಎರಡು ರೈಲುಗಳಲ್ಲಿ ನಗರಕ್ಕೆ ಬಂದಿದ್ದರು. ಆದರೆ ಯಶವಂತಪುರ ಮತ್ತು ಕೆಎಸ್‌ಆರ್ ರೈಲು ನಿಲ್ದಾಣಗಳಲ್ಲಿ ತಡವಾಗಿ ಬಂದಿಳಿದ ಕಾರಣ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ.
 
ಅಂದು ಯಶವಂತಪುರಕ್ಕೆ ಬೆಳಗ್ಗೆ 7.50ಕ್ಕೆ ಆಗಮಿಸಬೇಕಿದ್ದ ಬೀದರ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಬೆಳಗ್ಗೆ 11.05 ಕ್ಕೆ ಆಗಮಿಸಿತ್ತು. ಇದರಲ್ಲಿ ಬೀದರ್‌ನಿಂದ ಸಿವಿಲ್ ಇಂಜಿನಿಯರಿಂಗ್ ಪದವೀಧರರಾದ ಸಚಿನ್ ಸೇರಿದಂತೆ ಸುಮಾರು 120 ಕೆಪಿಎಸ್‌ಸಿ ಅಭ್ಯರ್ಥಿಗಳು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments