Webdunia - Bharat's app for daily news and videos

Install App

ಕುಮಾರಸ್ವಾಮಿ ಮಗನ ನಿಲ್ಲಿಸಿ ಬಿಜೆಪಿಯೇ ಜೆಡಿಎಸ್ ಮುಗಿಸಲು ಸ್ಕೆಚ್ ಹಾಕಿತ್ತು: ಕೃಷ್ಣಭೈರೇಗೌಡ

Krishnaveni K
ಭಾನುವಾರ, 8 ಡಿಸೆಂಬರ್ 2024 (10:48 IST)
ಬೆಂಗಳೂರು: ಈ ಹಿಂದೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿಯವರು ಮಗನನ್ನೇ ಕಣಕ್ಕಿಳಿಸಿ ಜೆಡಿಎಸ್ ಮುಗಿಸಲು ಬಿಜೆಪಿ ಸ್ಕೆಚ್ ಹಾಕಿತ್ತು ಎಂದು ಸಚಿವ ಕೃಷ್ಣ ಭೈರೇಗೌಡ ವ್ಯಂಗ್ಯ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಯಾವ ವಿರೋಧ ಪಕ್ಷದವರನ್ನೂ ದಮನಿಸಲು ಪ್ರಯತ್ನ ನಡೆಸಿಲ್ಲ ಎಂದಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಡುವವರು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳಿಗೂ ಅದರದ್ದೇ ಆದ ಸ್ಥಾನವಿದೆ. ಎಲ್ಲಾ ಪಕ್ಷಗಳೂ ಬೇಕು. ಅದೇ ರೀತಿ ಜೆಡಿಎಸ್ ನವರೂ ಇರಲಿ, ಅವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ.

ನಾವು ಯಾವ ಪಕ್ಷವನ್ನೂ, ನಾಯಕರನ್ನೂ ಮುಗಿಸಲು ಸ್ಕೆಚ್ ಹಾಕಿಲ್ಲ. ಆದರೆ ಬಿಜೆಪಿಯವರು ಈ ಹಿಂದೆ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸುವಂತೆ ಮಾಡಿ ಜೆಡಿಎಸ್ ಮುಗಿಸಲು ಸ್ಕೆಚ್ ಹಾಕಿದ್ದರು. ಕುಮಾರಸ್ವಾಮಿ ಮೂಲಕ ಮಗನನ್ನು ಚುನಾವಣೆಗೆ ನಿಲ್ಲಿಸುವಂತೆ ಮಾಡಿದರು ಎಂದಿದ್ದಾರೆ.

ಇನ್ನು ಬಳ್ಳಾರಿ ಬಾಣಂತಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಳಪೆ ಔಷಧ ಪೂರೈಸಿದ ಕಂಪನಿಗಳ ವಿರುದ್ಧ ತಕ್ಕ ಕ್ರಮ ಕೈಗೊಳ್ಳುತ್ತೇವೆ. ಯಾರು ತಪ್ಪಿತಸ್ಥರಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸ ಮಾಡುತ್ತೇವೆ. ಇಂತಹದ್ದೊಂದು ದುರಂತ ಆಗಬಾರದಿತ್ತು. ಇದಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments