ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

Krishnaveni K
ಶನಿವಾರ, 8 ನವೆಂಬರ್ 2025 (09:38 IST)
ಬೆಂಗಳೂರು: ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ಕೇಂದ್ರ ಮತ್ತು ರಾಜ್ಯದ ನಡುವೆ ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈ ನಡುವೆ ರೈತರು ಪ್ರತಿಭಟನೆ ನಡೆಸುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ ಎಂದು ಕೃಷ್ಣ ಭೈರೇಗೌಡ ಪ್ರಶ್ನೆ ಮಾಡಿದ್ದಾರೆ.

ಕಬ್ಬು ಬೆಳೆಗಾರರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಬಿಜೆಪಿ ನಾಯಕರು ರಾಜ್ಯ ಸರ್ಕಾರದ್ದೇ ತಪ್ಪು ಎನ್ನುತ್ತಿದ್ದಾರೆ. ಇದರ ನಡುವೆ ಸಚಿವ ಕೃಷ್ಣಭೈರೇಗೌಡ ಕೇಂದ್ರದ ಮೇಲೆ ಹರಿಹಾಯ್ದಿದ್ದಾರೆ.

ನಾವು ಸಕ್ಕರೆ ಕಾರ್ಖಾನೆಗಳ ಮಾಲಿಕರ ಜೊತೆ ಸಭೆ ನಡೆಸಿ ರೈತರಿಗೆ ನೀಡಬೇಕಾದ ಹಣ ನೀಡುವಂತೆ ಒತ್ತಡ ಹೇರಿದ್ದೇವೆ. ಈಗ ಕೆಲವು ಕಾರ್ಖಾನೆಗಳ ಮಾಲಿಕರು ನಿಗದಿಯಾಗಿರುವ ಎಂಆರ್ ಪಿಗಿಂತ ಹೆಚ್ಚಿನ ಬೆಲೆಯನ್ನೇ ನೀಡುತ್ತಿದ್ದಾರೆ. ಕಡಿಮೆ ಕೊಡುವವರಿಗೆ ಹೆಚ್ಚು ಕೊಡುವಂತೆ ಹೇಳಿದ್ದೇವೆ.

ನಮ್ಮ ಪ್ರಯತ್ನವನ್ನು ನಾವು ಮಾಡಿದ್ದೇವೆ. ಅಷ್ಟಕ್ಕೂ ಎಂಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅವರೇ ಕಡಿಮೆ ಎಂಆರ್ ಪಿ ನಿಗದಿ ಮಾಡಿದ್ದಾರೆ. ಅವರು ಹೆಚ್ಚು ಮಾಡಲಿ ಎಂದಿದ್ದಾರೆ. ಇನ್ನು ಈ ಸಮಸ್ಯೆ ಬಗೆಹರಿಸುವುದು ಕೇವಲ ರಾಜ್ಯ ಸರ್ಕಾರದ ಜವಾಬ್ಧಾರಿಯಾದರೆ ಅವರು ಏನಕ್ಕೆ ಇದ್ದಾರೆ? ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ ಎಂದು ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments