ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Krishnaveni K
ಗುರುವಾರ, 16 ಅಕ್ಟೋಬರ್ 2025 (11:46 IST)
ಬೆಂಗಳೂರು: ಆರ್ ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದಿಸುವುದು ಖಂಡನೀಯ. ಅವರ ಜೊತೆಗೆ ನಾವಿದ್ದೇವೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಆರ್ ಎಸ್ಎಸ್ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಇದಾದ ಬಳಿಕ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ನಿನ್ನೆ ಅಡಿಯೋವೊಂದನ್ನೂ ಬಿಡುಗಡೆ ಮಾಡಿದ್ದರು.

ಇದರ ಬಗ್ಗೆ ಈಗ ಕೃಷ್ಣ ಭೈರೇಗೌಡ ಪ್ರತಿಕ್ರಿಯಿಸಿದ್ದಾರೆ. ‘ಸಂಪುಟ ಸಹೋದ್ಯೋಗಿ , ಮಿತ್ರ ಶ್ರೀ ಪ್ರಿಯಾಂಕ್ ಖರ್ಗೆಯವರನ್ನು ನಿಂದಿಸುವುದು ಮತ್ತು ಅವರ ಕುಟುಂಬಸ್ಥರ ಮೇಲೆ ಅಸಭ್ಯವಾಗಿ ದಾಳಿ ನಡೆಸುತ್ತಿರುವುದು ಖಂಡನೀಯ , ಅವರ ಜೊತೆಗೆ ನಾವೆಲ್ಲೂರು ಇದ್ದೇವೆ

ಸಂವಿದಾನ ವಿರೋಧಿ ಚಟುವಟಿಕೆಗಳನ್ನು ನಡೆಸುವ , ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಯಾವುದೇ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳಲು ಅವಕಾಶ ಇರಬಾರದು.

ಬಿಜೆಪಿ ಪರಿವಾರದವರು ಸಾರ್ವಜನಿಕ ವಾಗ್ವದದ ಮಟ್ಟವನ್ನು ಬಹಳ ಕೀಳುಮಟ್ಟಕ್ಕೆ ಇಳಿಸಿದ್ದಾರೆ.  ಅದರ ಭಾಗವಾಗಿಯೇ ಪ್ರಿಯಾಂಕ್ ಖರ್ಗೆಯವರನ್ನು ಫೋನಿನ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಕೊಡುವುದು, ನಿಂದಿಸುವುದು ಹಾಗೂ ಟ್ರೊಲ್ ಮಾಡುವುದು ಸಭ್ಯತೆಯಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments