Publish Date: Tue, 16 Jun 2026 (16:04 IST)
Updated Date: Tue, 16 Jun 2026 (17:19 IST)
ಬೆಂಗಳೂರು: ತನಗೆ ನೀಡಿರುವ ಖಾತೆ ಬಗ್ಗೆ ಸ್ಪಷ್ಟನೆ ಇಲ್ಲದ ಬಗ್ಗೆ ಈಚೆಗೆ ಅಸಮಾಧಾನ ಹೊರಹಾಕಿದ್ದ ಸಚಿವ ಕೃಷ್ಣ ಭೈರೇಗೌಡ ಅವರು ಇದೀಗ ತಣ್ಣಗಾಗಿದ್ದಾರೆ. ಕೊನೆಗೂ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೃಷ್ಣಬೈರೇಗೌಡ ಅವರು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ಐದು ಜಿಬಿಎ ಆಯುಕ್ತರ ಜೊತೆ ಸಭೆ ನಡೆಸಿದರು. ಜಿಬಿಎಯಲ್ಲಿ ಆಗುತ್ತಿರುವ ಪ್ರಗತಿ ಮತ್ತು ಯೋಜನೆಗಳ ಬಗ್ಗೆ ಚರ್ಚೆ ಆಯುಕ್ತರ ಸಭೆಯಲ್ಲಿ ಚರ್ಚಿಸಿದರು.
ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಕ್ಲಾಸ್ ತೆಗೆದುಕೊಂಡರು. ರಸ್ತೆ ಗುಂಡಿಗಳು ಬೀಳುತ್ತಿವೆ. ನಿಮಗೆ ಗುಂಡಿಯಲ್ಲದ ರಸ್ತೆ ಮಾಡೋಕೆ ಆಗಲ್ವಾ. ಒಂದು ಕಡೆ ರಸ್ತೆ ಮಾಡ್ತೀರಾ, ಮತ್ತೊಂದು ಕಡೆ ಗುಂಡಿ ಬೀಳುತ್ತೆ ಯಾಕೆ. ಬೇರೆ ರಾಜ್ಯದಲ್ಲಿ ಈ ಸಮಸ್ಯೆ ಇಲ್ಲ, ಬೆಂಗಳೂರಲ್ಲಿ ಯಾಕೆ ಎಂದು ಪ್ರಶ್ನೆ ಮಾಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ