Publish Date: Sun, 14 Jun 2026 (10:56 IST)
Updated Date: Sun, 14 Jun 2026 (10:59 IST)
ನವದೆಹಲಿ: ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಚಿಸಲಾದ ಸಚಿವ ಸಂಪುಟದ ಬಗ್ಗೆ ಕೈ ನಾಯಕರಲ್ಲಿ ಅಸಮಾಧಾನಗಳು ವ್ಯಕ್ತವಾಗುತ್ತಲೇ ಇದೆ. ಇದೀಗ ಸಚಿವ ಸ್ಥಾನಕ್ಕಾಗಿ ತ್ರೀವ ಪೈಪೋಟಿ ಶುರುವಾಗಿದೆ.
ಈ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಚಿವ ಸ್ಥಾನ ಪಡೆದುಕೊಂಡಿರುವ ಕೃಷ್ಣ ಭೈರೇಗೌಡ ಅವರು ಬಿಡಿಎ ಮತ್ತು ಬಿಎಂಆರ್ಡಿಎ ಅಧಿಕಾರ ಸಿಗದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಸ್ಪಷ್ಟನೆ ಸಿಗುವವರೆಗೂ ಖಾತೆ ಸ್ವೀಕರಿಸದಿರಲು ನಿರ್ಧರಿಸಿರುವ ಅವರು ದೆಹಲಿಗೆ ತೆರಳಿ ಹೈಕಮಾಂಡ್ಗೆ ಈ ಸಂಬಂಧ ಒತ್ತಡ ಹೇರುವ ಯತ್ನ ಮಾಡಿದ್ದಾರೆ.
ಈ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ ಅವರು, ಜವಾಬ್ದಾರಿ ವಹಿಸುವಾಗ, ಜವಾಬ್ದಾರಿಯಲ್ಲಿ ಸ್ಪಷ್ಟನೆ ಇದ್ದರೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಇಲ್ಲದೆ ಹೋದಲ್ಲಿ ನಿರೀಕ್ಷೆಯ ಮಟ್ಟಿಗೆ ಕೆಲಸ ಮಾಡಲು ಆಗುವುದಿಲ್ಲ. ನಿರೀಕ್ಷೆಗೆ ತಕ್ಕ ಹಾಗೇ ಫಲಿತಾಂಶವನ್ನು ಪಡೆಯಕ್ಕೆ ಆಗುವುದಿಲ್ಲ.
ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೂ ಹೇಳಿದ್ದು, ಅವರ ತೀರ್ಮಾನ ನೋಡಿಕೊಂಡು ಮುಂದಿನ ಕೆಲಸವನ್ನು ಮಾಡುತ್ತೇನೆ ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ