ಕೃತಿ ಕುಮಾರಿ ಹತ್ಯೆ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು: ಎಲ್ಲಿದ್ದ ಆರೋಪಿ

Krishnaveni K
ಶನಿವಾರ, 27 ಜುಲೈ 2024 (11:41 IST)
ಬೆಂಗಳೂರು: ಬಿಹಾರ ಮೂಲದ ಯುವತಿ ಕೃತಿ ಕುಮಾರಿಯನ್ನು ಬೆಂಗಳೂರಿನ ಪಿಜಿಯಲ್ಲಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃತಿ ಕುಮಾರಿ ಗೆಳತಿಯ ಪ್ರೇಯಸಿ ಅಭಿಷೇಕ್ ಆರೋಪಿ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ಮನೆಯೊಂದರಲ್ಲಿ ಇರಿಸಿಕೊಂಡಿದ್ದ. ಆದರೆ ಅಲ್ಲಿಂದ ಆಕೆಯನ್ನು ರಕ್ಷಿಸಲು ಕೃತಿ ಕುಮಾರಿ ಸಹಾಯ ಮಾಡಿದ್ದಳು. ಇದೇ ಕಾರಣಕ್ಕೆ ರಾತ್ರಿ 11.30 ರ ವೇಳೆಗೆ ಕೋರಮಂಗಲದ ಪಿಜಿಗೆ ನುಗ್ಗಿದ ಆರೋಪಿ ಅಭಿಷೇಕ್ ಎಲ್ಲರೂ ನೋಡುತ್ತಿರುವಂತೆಯೇ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ.

ಈತನ ಕೃತ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಘಟನೆ ವೇಳೆ ಕೃತಿ ಸಹಾಯಕ್ಕಾಗಿ ಪಿಜಿಯಲ್ಲಿದ್ದ ಯುವತಿಯರನ್ನು ಕರೆದಿದ್ದಳು. ಆದರೆ ಅವರು ಅಸಹಾಯಕರಾಗಿ ನಿಂತು ನೋಡುತ್ತಿದ್ದರೇ ವಿನಹ ಸಹಾಯಕ್ಕೆ ಧಾವಿಸಲಿಲ್ಲ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದು ಅಭಿಷೇಕ್ ತಲೆಮರೆಸಿಕೊಂಡಿದ್ದ. ಆತ ಪರ ರಾಜ್ಯಕ್ಕೆ ಓಡಿ ಹೋಗಿರಬಹುದು ಎಂದು ಶಂಕಿಸಲಾಗಿತ್ತು.

ಇದೀಗ ಪೊಲೀಸರು ಅತನನ್ನು ಮಧ್ಯಪ್ರದೇಶದಲ್ಲಿ ಬಂಧನ ಮಾಡಿದ್ದಾರೆ. ಕೃತ್ಯ ನಡೆದ ದಿನದಿಂದಲೂ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ