ಡೆಡ್ ಸ್ಟೋರೇಜ್ ಹಂತ ತಲುಪಿದ ಕೆಆರ್ ಎಸ್ ಡ್ಯಾಮ್!

Webdunia
ಶನಿವಾರ, 3 ಆಗಸ್ಟ್ 2019 (09:42 IST)
ಮಂಡ್ಯ: ಒಂದೆಡೆ ಮಳೆಯ ಕೊರತೆ. ಇನ್ನೊಂದೆಡೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವ ಆದೇಶ ಪಾಲಿಸಬೇಕಾದ ಅನಿವಾರ್ಯತೆ. ಇದೆಲ್ಲದರ ನಡುವೆ ಕೆಆರ್ ಎಸ್ ಡ್ಯಾಮ್ ಒಡಲು ಬರಿದಾಗುವ ಹಂತಕ್ಕೆ ತಲುಪಿದೆ.


ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದಂತೆ ಪ್ರತಿನಿತ್ಯ 1 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಕಾವೇರಿ ಪ್ರದೇಶದಲ್ಲಿ ನಿರೀಕ್ಷಿತ ಮಳೆಯಾಗದೇ ಡ್ಯಾಮ್ ನಲ್ಲಿ ಸಾಕಷ್ಟು ನೀರಿಲ್ಲ. ಇದರಿಂದಾಗಿ ಇನ್ನು ಐದೇ ದಿನಗಳಲ್ಲಿ ಕೆಆರ್ ಎಸ್ ಡ್ಯಾಮ್ ಡೆಡ್ ಸ್ಟೋರೇಜ್ ಹಂತ ತಲುಪಿದೆ.

ಹಾಲಿ 83 ಅಡಿ ನೀರಿದ್ದು, ನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಸೇರಿದಂತೆ ಇನ್ನು ಐದು ದಿನ ಸುಮಾರು 7 ಸಾವಿರ ಕ್ಯುಸೆಕ್ಸ್ ನೀರು ಹರಿಸಿದರೆ ಡ್ಯಾಮ್ ನಲ್ಲಿ ನೀರಿನ ಮಟ್ಟ 75 ಅಡಿಗೆ ತಲುಪಲಿದೆ. ಇದರೊಂದಿಗೆ ಡ್ಯಾಮ್ ಡೆಡ್ ಸ್ಟೋರೇಜ್ ಹಂತ ತಲುಪಲಿದೆ. ಇತ್ತ ರೈತರು ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಆದೇಶ ಪಾಲಿಸಲೇಬೇಕಾದ ಅನಿವಾರ್ಯತೆಯಲ್ಲಿ ರಾಜ್ಯ ಸರ್ಕಾರವಿದೆ. ಈ ನಡುವೆ ಸಂಸದೆ ಸುಮಲತಾ ಅಂಬರೀಶ್ ಕೂಡಾ ಸಂಸತ್ತಿನಲ್ಲಿ ಈ ವಿಚಾರವಾಗಿ ವಾದ ಮಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಕೇರಳ: ನಾಮಪತ್ರ ಸಲ್ಲಿಸಿದ ಎನ್‌ಡಿಡ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಇದೆಂಥಾ ಆರೋಪ

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ನಾಪತ್ತೆಯಾದ ಮಾಜಿ ಶಾಸಕ ಪುತ್ರ ರಾಜು ಬೋಳಶೆಟ್ಟಿ ಕೊಲೆ ಶಂಕೆ

ದೆಹಲಿ ವಿಧಾನಸಭಾ ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ, ಪ್ರಧಾನಿ, ಗೃಹ ಸಚಿವರಿಗೆಯೇ ಸಂದೇಶ

ಮುಂದಿನ ಸುದ್ದಿ
Show comments