ಮೋದಿ ಫೋಟೋ ಬಳಸದೇ ನೀವು ಗೆದ್ದು ತೋರಿಸಿ ನೋಡೋಣ: ಯಡಿಯೂರಪ್ಪಗೆ ಈಶ್ವರಪ್ಪ ಸವಾಲು

Krishnaveni K
ಗುರುವಾರ, 11 ಏಪ್ರಿಲ್ 2024 (14:01 IST)
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಆಂಡ್ ಸನ್ಸ್ ವಿರುದ್ಧ ತೊಡೆತಟ್ಟಿರುವ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಆದರೆ ಈಶ್ವರಪ್ಪ ಪ್ರಚಾರಕ್ಕೆ ಮೋದಿ ಫೋಟೋ ಬಳಸುವುದು ರಾಜ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕಾಗಿ ಚುನಾವಣಾ ಆಯೋಗದ ಮೊರೆ ಹೋಗಿರುವ ಯಡಿಯೂರಪ್ಪ ಬಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಮೋದಿ ಫೋಟೋ ಬಳಸಬಾರದು ಎಂದು ತಗಾದೆ ತೆಗೆದಿದೆ.

ಇದೀಗ ಇದಕ್ಕೆ ತಿರುಗೇಟು ನೀಡಿರುವ ಕೆಎಸ್ ಈಶ್ವರಪ್ಪ, ಹಾಗಿದ್ದರೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ಮೋದಿ ಫೋಟೋ ಬಳಸದೇ ಮಗನನ್ನು ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಎಡಭಾಗದಲ್ಲಿ ವಿಜಯೇಂದ್ರ, ಇನ್ನೊಂದು ಕಡೆ ಯಡಿಯೂರಪ್ಪ ಫೋಟೋ ಬಳಸಿ ಮಗನನ್ನು ಗೆಲ್ಲಿಸಲಿ ಎಂದಿದ್ದಾರೆ.

‘ಮೋದಿ ಫೋಟೋ ಬಳಸದಂತೆ ತಡೆಯಲು ಅವರು ಯಾರು? ಮೋದಿ ವಿಶ್ವ ನಾಯಕ. ಅವರನ್ನು ಹೃದಯದಲ್ಲಿಟ್ಟುಕೊಂಡು ಆರಾಧಿಸುತ್ತೇನೆ. ನನ್ನನ್ನು ಯಾರೂ ತಡೆಯಲಾಗದು’ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments