Webdunia - Bharat's app for daily news and videos

Install App

ಮೋದಿ ಫೋಟೋ ಬಳಸದೇ ನೀವು ಗೆದ್ದು ತೋರಿಸಿ ನೋಡೋಣ: ಯಡಿಯೂರಪ್ಪಗೆ ಈಶ್ವರಪ್ಪ ಸವಾಲು

Krishnaveni K
ಗುರುವಾರ, 11 ಏಪ್ರಿಲ್ 2024 (14:01 IST)
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಆಂಡ್ ಸನ್ಸ್ ವಿರುದ್ಧ ತೊಡೆತಟ್ಟಿರುವ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಆದರೆ ಈಶ್ವರಪ್ಪ ಪ್ರಚಾರಕ್ಕೆ ಮೋದಿ ಫೋಟೋ ಬಳಸುವುದು ರಾಜ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕಾಗಿ ಚುನಾವಣಾ ಆಯೋಗದ ಮೊರೆ ಹೋಗಿರುವ ಯಡಿಯೂರಪ್ಪ ಬಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಮೋದಿ ಫೋಟೋ ಬಳಸಬಾರದು ಎಂದು ತಗಾದೆ ತೆಗೆದಿದೆ.

ಇದೀಗ ಇದಕ್ಕೆ ತಿರುಗೇಟು ನೀಡಿರುವ ಕೆಎಸ್ ಈಶ್ವರಪ್ಪ, ಹಾಗಿದ್ದರೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ಮೋದಿ ಫೋಟೋ ಬಳಸದೇ ಮಗನನ್ನು ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಎಡಭಾಗದಲ್ಲಿ ವಿಜಯೇಂದ್ರ, ಇನ್ನೊಂದು ಕಡೆ ಯಡಿಯೂರಪ್ಪ ಫೋಟೋ ಬಳಸಿ ಮಗನನ್ನು ಗೆಲ್ಲಿಸಲಿ ಎಂದಿದ್ದಾರೆ.

‘ಮೋದಿ ಫೋಟೋ ಬಳಸದಂತೆ ತಡೆಯಲು ಅವರು ಯಾರು? ಮೋದಿ ವಿಶ್ವ ನಾಯಕ. ಅವರನ್ನು ಹೃದಯದಲ್ಲಿಟ್ಟುಕೊಂಡು ಆರಾಧಿಸುತ್ತೇನೆ. ನನ್ನನ್ನು ಯಾರೂ ತಡೆಯಲಾಗದು’ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments