Webdunia - Bharat's app for daily news and videos

Install App

ಬಿಜೆಪಿಯಿಂದ ಉಚ್ಚಾಟನೆಗೊಂಡ ಹಿರಿಯ ನಾಯಕ ಕೆಎಸ್ ಈಶ್ವರಪ್ಪ

Krishnaveni K
ಮಂಗಳವಾರ, 23 ಏಪ್ರಿಲ್ 2024 (09:10 IST)
ಬೆಂಗಳೂರು: ಈ ಬಾರಿ ಪಕ್ಷದ ವಿರುದ್ಧವೇ ಬಂಡಾಯವೆದ್ದು ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದೇ ಇದ್ದಿದ್ದು ಈಶ್ವರಪ್ಪ ಸಿಟ್ಟಿಗೆ ಕಾರಣವಾಗಿತ್ತು. ಈ ಕಾರಣಕ್ಕೆ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿದ್ದರು. ಬಹಿರಂಗವಾಗಿ ಯಡಿಯೂರಪ್ಪ ಮತ್ತು ಮಕ್ಕಳ ಮೇಲೆ ಕಿಡಿ ಕಾರುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಮನವೊಲಿಕೆಯ ಪ್ರಯತ್ನಕ್ಕೂ ಸೊಪ್ಪು ಹಾಕಿಲ್ಲ.

ಆದರೆ ತಾನು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಮೋದಿಯನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿರುವ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ಧಾರಿಗಳಿಂದ ಅವರನ್ನು ಮುಕ್ತಿಗೊಳಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ‍್ಯಕ್ಷ ಲಿಂಗರಾಜ ಪಾಟೀಲ್ ನೋಟಿಸ್ ನೀಡಿದ್ದಾರೆ. ನಾಮಪತ್ರ ಹಿಂಪಡೆಯಲು ನಿನ್ನೆ ಕೊನೆಯ ದಿನವಾಗಿತ್ತು. ಕೊನೆಯ ದಿನದವರೆಗೂ ಕಾದು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments