Webdunia - Bharat's app for daily news and videos

Install App

ಸಿಎಂ ಭೇಟಿ ಮಾಡಿದ ಕೆ ಎಸ್ ಈಶ್ವರಪ್ಪ

Webdunia
ಶುಕ್ರವಾರ, 3 ಫೆಬ್ರವರಿ 2023 (17:04 IST)
ಆರ್.ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು.  ಈ ವೇಳೆ ಮುಖ್ಯಮಂತ್ರಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಶಿವಮೊಗ್ಗ ಪ್ರವಾಸಕ್ಕೆ ಸಿಎಂ ಆಗಮಿಸುತ್ತಿರುವ ಕುರಿತು ಮಾತುಕತೆ ನಡೆಯಿತು. ಇದರ ಜೊತೆಯಲ್ಲಿಯೇ ಸಚಿವ ಸಂಪುಟ ವಿಸ್ತರಣೆ ವಿಷಯದ ಕುರಿತು ಪ್ರಸ್ತಾಪವಾಯಿತು. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ನಿರ್ಧಾರವಾಗಲಿದೆ ನಿಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಗೆ ಈಶ್ವರಪ್ಪ ಅಸಹನೆಗೊಂಡರು. ಈ ವೇಳೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ಇನ್ಮುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟವಾಗಿ ಸಿಎಂ ಗೆ ತಿಳಿಸಿದ್ದೇನೆ. ಇನ್ನೂ  ರಾಜಕಾರಣದಲ್ಲಿ ಏನೇನು ಆಗುತ್ತದೆ ಅಂತಾ ಯಾರಿಗೂ ಗೊತ್ತಾಗಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಳ್ಳುತ್ತಾನೆ ಅಂತಾ ಕನಸು ಬಿದ್ದಿತ್ತಾ? ಅವರು ಮಲಗಿದ್ದು ಒಂದು ಕಡೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ ಆದರೂ ಈ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂತು, ನಂತರ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಬೇಕಾಯಿತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

ಮುಂದಿನ ಸುದ್ದಿ
Show comments