Webdunia - Bharat's app for daily news and videos

Install App

ನಮ್ಮ ಮನೆ ಪಕ್ಕದಲ್ಲೇ ಇದ್ದರೂ ಸಿದ್ದರಾಮಯ್ಯನವರ ಪತ್ನಿಯನ್ನು ನೋಡಿಲ್ಲ: ಕೆಎಸ್ ಈಶ್ವರಪ್ಪ

Krishnaveni K
ಸೋಮವಾರ, 9 ಸೆಪ್ಟಂಬರ್ 2024 (13:52 IST)
ಬೆಂಗಳೂರು: ನಮ್ಮ ಮನೆ ಪಕ್ಕದಲ್ಲೇ ಇದ್ದರೂ ಸಿದ್ದರಾಮಯ್ಯನವರ ಪತ್ನಿಯನ್ನು ನಾನು ನೋಡಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರಿಗೆ ಅನ್ಯಾಯವಾಗಿ ತೊಂದರೆಯಾಗ್ತಿದೆಯಲ್ಲ ಎಂದು ನನಗೆ ಬೇಸರ ಎಂದು ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರನ್ನು ಎಳೆದು ತಂದಿರುವುದಕ್ಕೆ ಕೆಎಸ್ ಈಶ್ವರಪ್ಪ ಅನುಕಂಪ ವ್ಯಕ್ತಪಡಿಸಿದ್ದಾರೆ. ‘ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಸಿದ್ದರಾಮಯ್ಯನವರ ಮನೆ ನಮ್ಮ ಮನೆ ಪಕ್ಕದಲ್ಲೇ ಇದ್ದರು. ನಾನು ಸಿದ್ದರಾಮಯ್ಯನವರಿಗೆ ಒಮ್ಮೆ ನಮ್ಮ ಮನೆಯವರು ಅರಶಿನ ಕುಂಕುಮಕ್ಕೆ ಕರೆಯುತ್ತಿದ್ದಾರೆ, ಬರಲಿ ಎಂದಿದ್ದೆ. ಆದರೆ ಅದಕ್ಕೂ ಬಂದಿಲ್ಲ.  ಪಕ್ಕದ ಮನೆಯವರಾಗಿದ್ದರೂ ಒಮ್ಮೆಯೂ ನಾನು ಅವರ ಮುಖವನ್ನೂ ನೋಡಲಿಲ್ಲ’ ಎಂದು ಈಶ್ವರಪ್ಪ ಹೇಳಿದ್ದಾರೆ.

ನಾವು ಏನೋ ವ್ಯವಹಾರಗಳಿಗೆ ಇನ್ ಟ್ಯಾಕ್ಸ್ ವಿಚಾರಕ್ಕೆ ನಮ್ಮ ಮನೆಯವರ ಸಹಿ ಪಡೆಯುತ್ತೇವೆ. ಅದೇ ರೀತಿ ಪಾರ್ವತಮ್ಮನವರ ಸಹಿಯನ್ನೂ ಮುಡಾ ಸೈಟಿಗೆ ಪಡೆದಿರಬಹುದು. ಬಹುಶಃ ಅವರಿಗೆ ಅದು ಏನಕ್ಕೆ ಸಹಿ ತೆಗೆದುಕೊಂಡಿದ್ದಾರೆ ಎಂಬುದೂ ಗೊತ್ತಿರಲಿಲ್ಲ. ಹೀಗಾಗಿ ಅನ್ಯಾಯವಾಗಿ ಪಾರ್ವತಮ್ಮನವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶ ಎಂದು ಈಶ್ವರಪ್ಪ ಹೇಳಿದ್ದಾರೆ.

ಇನ್ನು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಎಸ್ ಈಶ್ವರಪ್ಪ, ನಾನು ಈ ಸರ್ಕಾರಕ್ಕೆ ಕೇವಲ ಹಿಂದೂಗಳ ಪರವಾಗಿ ಇರಿ ಎಂದು ಹೇಳುತ್ತಿಲ್ಲ. ಬದಲಾಗಿ ಎಲ್ಲರನ್ನೂ ಸಮಾನವಾಗಿ ನೋಡಲಿ ಎಂದಷ್ಟೇ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments