Webdunia - Bharat's app for daily news and videos

Install App

ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ವಾಗ್ದಾಳಿ ಮಾಡಿದ ಕೆಎಸ್ ಈಶ್ವರಪ್ಪ

Krishnaveni K
ಗುರುವಾರ, 28 ಮಾರ್ಚ್ 2024 (15:43 IST)
ಶಿವಮೊಗ್ಗ: ತಮಗೆ ಬಿಜೆಪಿ ಟಿಕೆಟ್ ಸಿಗದ ಆಕ್ರೋಶವನ್ನು ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ಹೊರಹಾಕಿದ್ದಾರೆ. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಮೇಲೆ ಆಕ್ರೋಶ ಹೊರಹಾಕಿದ್ದಾರೆ.

ಶಿವಮೊಗ್ಗದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ ನಡೆಸಲು ತೀರ್ಮಾನಿಸಿದ್ದಾರೆ. ಅವರು ಸ್ಪರ್ಧಿಸದಂತೆ ತಡೆಯಲು ಹೈಕಮಾಂಡ್ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಈಶ್ವರಪ್ಪ ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ಟೊಂಕ ಕಟ್ಟಿ ನಿಂತಿದ್ದಾರೆ.

ಶಿವಮೊಗ್ಗದ ತಮ್ಮ ನಿವಾಸದಲ್ಲೇ ಈಶ್ವರಪ್ಪ ಚುನಾವಣಾ ಕಚೇರಿ ತೆರೆದಿದ್ದಾರೆ. ಬಳಿಕ ಮಾತನಾಡಿದ ಅವರು ಏನೇ ಆದರೂ ಚುನಾವಣೆಗೆ ಸ್ಪರ್ಧೆ ಮಾಡಿಯೇ ತೀರುತ್ತೇನೆ. ಗೆದ್ದು ಮೋದಿ ಬಳಿ ಹೋಗುತ್ತೇನೆ ಎಂದು ಶಪಥ ಮಾಡಿದ್ದಾರೆ. ಜೊತೆಗೆ ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ವಾಗ್ದಾಳಿ ನಡೆಸಿದ್ದಾರೆ.

‘ನನ್ನ ಮಗನನ್ನು ಎಂಪಿ ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಯಡಿಯೂರಪ್ಪ ಸುಳ್ಳಿನ ಸರದಾರ. ಪಕ್ಷದಿಂದ ತೆಗೆದು ಹಾಕಿದ್ರೆ ಮತ್ತೆ ಬಿಜೆಪಿ ಸೇರ್ತೇನೆ. ಈ ಚುನಾವಣೆ ಬಳಿಕ ರಾಘವೇಂದ್ರ ಸೋತ ಮೇಲೆ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ ಕಳೆದುಕೊಳ್ಳುತ್ತಾರೆ’ ಎಂದು ಈಶ‍್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

ಮುಂದಿನ ಸುದ್ದಿ
Show comments