ಎಲ್ಲಾ ಅಧಿಕಾರ ಯಡಿಯೂರಪ್ಪ ಮಕ್ಕಳಿಗೆ, ನನ್ನ ಮಗ ಏನು ತಪ್ಪು ಮಾಡಿದ್ದ? ಕೆಎಸ್ ಈಶ್ವರಪ್ಪ

Krishnaveni K
ಬುಧವಾರ, 27 ಮಾರ್ಚ್ 2024 (10:51 IST)
Photo Courtesy: Twitter
ಶಿವಮೊಗ್ಗ: ತಮ್ಮ ಪುತ್ರನಿಗೆ ಟಿಕೆಟ್ ಕೊಡದ ರಾಜ್ಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಮತ್ತೆ ಕೆಎಸ್ ಈಶ್ವರಪ್ಪ ಗುಡುಗಿದ್ದಾರೆ.

ಹಾವೇರಿಯಿಂದ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸಲು ಈಶ್ವರಪ್ಪ ಶತಾಯ ಗತಾಯ ಪ್ರಯತ್ನಿಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಇದು ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಯಡಿಯೂರಪ್ಪ ವಿರುದ್ಧ ರೊಚ್ಚಿಗೆದ್ದು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಯಡಿಯೂರಪ್ಪ ಮೇಲೆ ಸಿಟ್ಟಿಗೆದ್ದಿರುವ ಈಶ್ವರಪ್ಪ ಮತ್ತೊಮ್ಮೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಯಡಿಯೂರಪ್ಪ ಅವರ ಒಬ್ಬ ಮಗ ರಾಜ್ಯಾಧ್ಯಕ್ಷ, ಇನ್ನೊಬ್ಬ ಮಗ ಎಂಪಿ. ನನ್ನ ಮಗ ಏನು ತಪ್ಪು ಮಾಡಿದ್ದಾನೆ? ಕಾಂಗ್ರೆಸ್ ನ ಕುಟುಂಬ ಸಂಸ್ಕೃತಿ ರಾಜ್ಯ ಬಿಜೆಪಿಯಲ್ಲೂ ಕಾಣುತ್ತಿದೆ. ಪಕ್ಷ ಕಟ್ಟಿದವರಿಗೆ ನೋವಾಗಿದ್ದು, ಸರಿ ಮಾಡಲು ಸ್ಪರ್ಧೆ ಮಾಡುತ್ತಿದ್ದೇನೆ ಎಂದಿದ್ದಾರೆ.

ಯತ್ನಾಳ್ ಬೆಳೆದರೆ ಇನ್ನೊಬ್ಬ ಲಿಂಗಾಯತ ಬೆಳೆಯುತ್ತಾನೆ ಎಂದು ತುಳಿದರು. ಸಿಟಿ ರವಿ ಪಕ್ಷ ಸಂಘಟಿಸಿದರೂ ಟಿಕೆಟ್ ಕೊಡಲಿಲ್ಲ. ಮನೆಗೆ ಹೋದಾಗ ನಿಮಗೆ ಫೋನ್ ಮಾಡಿ ನನಗೆ ಬೆಂಬಲಿಸದಂತೆ ಬೆದರಿಸಬಹುದು. ಆದರೆ ಯಾವುದಕ್ಕೂ ಜಗ್ಗಬೇಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments