Webdunia - Bharat's app for daily news and videos

Install App

ಮುಸಲ್ಮಾನರನ್ನು ಸಂತೋಷಪಡಿಸಲು ವಯನಾಡಿನಲ್ಲಿ ಕರ್ನಾಟಕ ಮನೆ ಕಟ್ಟಿಸುತ್ತಿದೆ: ಈಶ್ವರಪ್ಪ ವ್ಯಂಗ್ಯ

Krishnaveni K
ಗುರುವಾರ, 12 ಡಿಸೆಂಬರ್ 2024 (16:30 IST)
ಬೆಂಗಳೂರು: ವಯನಾಡಿನ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ 100 ಮನೆ ಕಟ್ಟಿಸಿಕೊಡುವುದಾಗಿ ಸಿಎಂ ಸಿದ್ದರಾಮಯ್ಯ ವಾಗ್ದಾನ ನೀಡಿರುವುದನ್ನು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.

ನಮ್ಮ ರಾಜ್ಯದಲ್ಲೇ ಬೇಕಾದಷ್ಟು ಸಮಸ್ಯೆ ಇರುವಾಗ ನೆರೆ ರಾಜ್ಯದ ಸಂತ್ರಸ್ತರಿಗೆ ನೆರವು ನೀಡುವ ಜರೂರತ್ತು ಏನು ಎಂದು ಸಿಟಿ ರವಿ ನಿನ್ನೆ ಪ್ರಶ್ನೆ ಮಾಡಿದ್ದಾರೆ. ಇದೀಗ ಈಶ್ವರಪ್ಪ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ವಯನಾಡಿನಲ್ಲಿ ಮುಸ್ಲಿಮರನ್ನು ತೃಪ್ತಿಪಡಿಸಲು ಮನೆ ಕಟ್ಟಿಸಿಕೊಡಲು ರಾಜ್ಯ ಸರ್ಕಾರರ ಮುಂದಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕೇರಳದ ವಯನಾಡಿನಲ್ಲಿ ಭೂ ಕುಸಿತದಿಂದ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವುದಾಗಿ ರಾಜ್ಯ ಸರ್ಕಾರ ಮುಂದಾಗಿರುವುದು ಮಾನವೀಯತೆ ದೃಷ್ಟಿಯಿಂದಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನವೊಲಿಸಲು ಆ ರೀತಿ ಹೇಳಿದ್ದಾರೆ. ಇತ್ತೀಚೆಗೆ ಪ್ರಿಯಾಂಕ ಗಾಂಧಿ ಗೆದ್ದಿರುವುದರಿಂದ ವಯನಾಡಿನ ಮುಸ್ಲಿಮರ ತೃಪ್ತಿ ಪಡಿಸಲು ಹೊರಟಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.

ರಾಜ್ಯದಲ್ಲೂ ಸಾಕಷ್ಟು ಕಡೆ ನೆರೆಯಿಂದಾಗಿ ಮನೆಗಳು ಬಿದ್ದಿವೆ. ಶಿವಮೊಗ್ಗದಲ್ಲಿಮನೆಗಳು ಬಿದ್ದಿವೆ. ಇನ್ನೂ ಅವರಿಗೆ ಪರಿಹಾರ ಕೊಟ್ಟಿಲ್ಲ. ಮೊದಲು ಕರ್ನಾಟಕದಲ್ಲಿ ಮನೆ ಬಿದ್ದಿರೋ ಜಾಗದಲ್ಲಿ ಪರಿಹಾರ ಕೊಡಲಿ. ಬಳಿಕ ನೆರೆ ರಾಜ್ಯದವರಿಗೆ ಸಹಾಯ ಮಾಡಲಿ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments