Webdunia - Bharat's app for daily news and videos

Install App

ಸಂಕ್ರಾಂತಿ ಹಬ್ಬದ ಬಳಿಕ ಬಸ್ ದರ ಏರಿಕೆ ಗ್ಯಾರಂಟಿ

Krishnaveni K
ಗುರುವಾರ, 2 ಜನವರಿ 2025 (09:51 IST)
ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಸಾಮಾನ್ಯ ವರ್ಗದ ಜನರಿಗೆ ಬಸ್ ದರ ಏರಿಕೆಯ ಗ್ಯಾರಂಟಿ ಕಾದಿದೆ. ಹಬ್ಬ ಮುಗಿದ ಬೆನ್ನಲ್ಲೇ ಬಸ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಕಳೆದ 10 ವರ್ಷಗಳಿಂದ ಬಿಎಂಟಿಸಿ ಬಸ್ ದರ ಏರಿಕೆ ಮಾಡಿಲ್ಲ. ಹೀಗಾಗಿ ಬಸ್ ದರ ಏರಿಕೆ ಮಾಡುವಂತೆ ನಿಗಮಗಳಿಂದ ಬೇಡಿಕೆ ಬಂದಿದೆ. ಸಂಕ್ರಾಂತಿ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾರಿಗೆ ಸಂಸ್ಥೆ ಮುಖಂಡರ ಸಭೆ ನಡೆಯಲಿದೆ.

ಕೆಎಸ್ ಆರ್ ಟಿಸಿ ದರ ಏರಿಕೆಯಾಗಿ 5 ವರ್ಷಗಳಾಗಿವೆ. ಹೀಗಾಗಿ ಈಗ ಬಸ್ ದರ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಆರ್ಥಿಕ ಸಂಕಷ್ಟವನ್ನು ಸರಿದೂಗಿಸಬೇಕಾದರೆ ಬಸ್ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಂಸ್ಥೆಗಳು ಬೇಡಿಕೆಯಿಟ್ಟಿವೆ.

ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಬಿಡಿ ಭಾಗಗಳೂ ದುಬಾರಿಯಾಗಿದೆ. ಹೀಗಾಗಿ ಟಿಕೆಟ್ ದರ ಏರಿಕೆ ಮಾಡಬೇಕೆಂದು ನಾಲ್ಕೂ ನಿಗಮಗಳೂ ಬೇಡಿಕೆಯಿಟ್ಟಿದೆ. ಸಾರಿಗೆ ನಿಗಮಗಳ ಬೇಡಿಕೆಗೆ ಸರ್ಕಾರ ಕೂಡಾ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಸಂಕ್ರಾಂತಿ ಹಬ್ಬದ ಬಳಿಕ ಶೇ.15 ರಷ್ಟು ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments