Webdunia - Bharat's app for daily news and videos

Install App

ಶಕ್ತಿ ಯೋಜನೆಯಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿಗೆ ನಷ್ಟ: ಸದನದಲ್ಲೇ ಒಪ್ಪಿಕೊಂಡ ಸಾರಿಗೆ ಸಚಿವ

Krishnaveni K
ಬುಧವಾರ, 12 ಮಾರ್ಚ್ 2025 (13:53 IST)
ಬೆಂಗಳೂರು: ಶಕ್ತಿ ಯೋಜನೆಯಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಲಾಭದಲ್ಲಿದೆ ಎನ್ನುತ್ತಿದ್ದ ಸಾರಿಗೆ ಸಚಿವರೇ ಈಗ ಸದನದಲ್ಲಿ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಕರ್ನಾಟಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವಿದೆ. ಆದರೆ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ ಎಂದು ವಿಪಕ್ಷಗಳು ಟೀಕೆ ಮಾಡುತ್ತಲೇ ಇದ್ದವು. ಆದರೆ ಆಗೆಲ್ಲಾ ಸಚಿವರು ಶಕ್ತಿ ಯೋಜನೆಯಿಂದ ಲಾಭವೇ ಆಗಿದೆ ಎನ್ನುತ್ತಿದ್ದರು.

ಆದರೆ ಇಂದು ಎಂಎಲ್ ಸಿ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಮಲಿಂಗಾ ರೆಡ್ಡಿ ಯಾವ ನಿಗಮಕ್ಕೆ ಎಷ್ಟು ನಷ್ಟವಾಗಿದೆ ಎಂಬ ಉತ್ತರ ನೀಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಕೆಎಸ್ ಆರ್ ಟಿಸಿಗೆ 1500 ಕೋಟಿ ರೂ., ಬಿಎಂಟಿಸಿ 1544 ಕೋಟಿ ರೂ., ಕೆಕೆಆರ್ ಟಿಸಿಗೆ 777 ಕೋಟಿ ರೂ., ಎನ್ ಡಬ್ಲ್ಯುಕೆಆರ್ ಟಿಸಿಗೆ 1386 ಕೋಟಿ ರೂ.  ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಮ್ಮಲ್ಲಿ ಮಾತ್ರವಲ್ಲ. ಪ್ರಪಂಚದ ಯಾವುದೇ ಭಾಗದಲ್ಲಿ ಬಸ್ ನಿಗಮಗಳು ನಷ್ಟದಲ್ಲಿವೆ. ಸರ್ಕಾರದಿಂದ ಶಕ್ತಿ ಯೋಜನೆಯ ಪೂರ್ಣ ಮೊತ್ತ ಪಾವತಿಯಾಗಬೇಕಿದೆ. ಶೇ. 40 ರಷ್ಟು ಬಸ್ ಗಳು ನಷ್ಟದಲ್ಲೇ ಓಡುತ್ತಿವೆ. ಶೇ.30 ರಷ್ಟು ಬಸ್ ಗಳು ಲಾಭದಲ್ಲಿವೆ.

ಶಕ್ತಿ ಯೋಜನೆಯಿಂದ ಎಷ್ಟು ನಷ್ಟವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಶಕ್ತಿ ಯೋಜನೆಗೆ ಒಟ್ಟು 9978 ಕೋಟಿ ರೂ. ಖರ್ಚಾಗಿದೆ. 448 ಬಿಎಂಟಿಸಿ ಬಸ್ ಖರೀದಿ ಮಾಡಿದ್ದೇವೆ.  ಹೊಸದಾಗಿ 5,360 ಬಸ್ ಖರೀದಿ ಮಾಡಿದ್ದೇವೆ. 40 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಿಬ್ಬಂದಿಯಿಂದ 650 ರೂ. ಪಡೆಯಲಾಗುತ್ತಿದೆ ಎಂದು ವಿವರಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments