Webdunia - Bharat's app for daily news and videos

Install App

ಬಸ್ ಟಿಕೆಟ್ ದರ ಹೆಚ್ಚಳದಿಂದ ಎಲ್ಲಿಂದ ಎಲ್ಲಿಗೆ ಪ್ರಯಾಣ ದರ ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Krishnaveni K
ಶುಕ್ರವಾರ, 3 ಜನವರಿ 2025 (11:56 IST)
ಬೆಂಗಳೂರು: ರಾಜ್ಯ ಸರ್ಕಾರ ನಿನ್ನೆ ರಾತ್ರೋ ರಾತ್ರಿ ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ್ದು ಎಲ್ಲಿಂದ ಎಲ್ಲಿಗೆ ಪ್ರಯಾಣ ಮಾಡಲು ಇನ್ನು ಎಷ್ಟು ದರವಾಗುತ್ತದೆ ಎಂಬ ವಿವರ ಇಲ್ಲಿದೆ.

ರಾಜ್ಯ ಸರ್ಕಾರ ಕೆಎಸ್ಆರ್ ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ಬಸ್ ಗಳ ಟಿಕೆಟ್ ದರವನ್ನು ಶೇ.15 ಕ್ಕೆ ಏರಿಕೆ ಮಾಡಿತ್ತು. ಈ ಆದೇಶ ಜನವರಿ 5 ರಿಂದ ಜಾರಿಗೆ ಬರಲಿದೆ. ಅಂದರೆ ಭಾನುವಾರದಿಂದ ಬಸ್ ಟಿಕೆಟ್ ದರ ಹೆಚ್ಚಳವಾಗಲಿದೆ.

ಇದುವರೆಗೆ ಬೆಂಗಳೂರಿನಿಂದ ಮಡಿಕೇರಿಗೆ ಕರ್ನಾಟಕ ಸಾರಿಗೆ ಸಾಮಾನ್ಯ ಬಸ್ ನಲ್ಲಿ ಸಂಚರಿಸಲು 358 ರೂ.ಗಳಾಗುತ್ತಿತ್ತು. ಇನ್ನೀಗ 411 ರೂ.ಗಳಾಗಲಿವೆ. ಬೆಂಗಳೂರಿನಿಂದ ಮೈಸೂರಿಗೆ ಈಗ 185 ರೂ.ಗಳಿದ್ದು ಇನ್ನು 213 ರೂ.ಗಳಾಗಲಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಈ ಮೊದಲು 285 ರೂ. ಗಳಿತ್ತು. ಪರಿಷ್ಕೃತಗೊಂಡ ದರ 328 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಿಂದ ಹಾಸನಕ್ಕೆ ಈ ಮೊದಲು 246 ರೂ. ಇನ್ನೀಗ 282 ರೂ. ಆಗಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಈ ಮೊದಲು 424 ರೂ. ದರವಿತ್ತು ಇನ್ನೀಗ 477 ರೂ.ಗೆ ಏರಿಕೆಯಾಗಲಿದೆ. ಬೆಂಗಳೂರಿನಿಂದ ರಾಯಚೂರಿಗೆ ಈ ಮೊದಲು 556 ರೂ.ಗಳಷ್ಟಿತ್ತು. ಇನ್ನು 639 ರೂ.ಗೆ ಏರಿಕೆಯಾಗಲಿದೆ. ಇನ್ನು ಬೆಂಗಳೂರಿನಿಂದ ಬಳ್ಳಾರಿಗೆ ಈ ಮೊದಲು 376 ರೂ.ಗಳಿದ್ದರೆ ಇನ್ನು 432 ರೂ.ಗಳಾಗಲಿದೆ.

ಕೇವಲ ಕೆಎಸ್ ಆರ್ ಟಿಸಿ ಮಾತ್ರವಲ್ಲ, ಬಿಎಂಟಿಸಿ ಬಸ್ ದರವೂ ಏರಿಕೆಯಾಗಿದೆ. ಇದುವರೆಗೆ ಮೆಜೆಸ್ಟಿಕ್ ನಿಂದ ಜಯನಗರಕ್ಕೆ 20 ರೂ.ಗಳಷ್ಟು ಟಿಕೆಟ್ ದರವಿತ್ತು. ಇನ್ನು 23 ರೂ.ಗಳಾಗಲಿವೆ. ಅದೇ ರೀತಿ ಸರ್ಜಾಪುರಕ್ಕೆ 25 ರೂ.ಗಳಷ್ಟು ಇದ್ದಿದ್ದು ಇನ್ನು 28 ರೂ.ಗಳಾಗಲಿದೆ. ಇದೇ ರೀತಿ ವಿವಿಧ ಭಾಗಗಳಲ್ಲಿ ಈಗ ಇರುವ ಬೆಲೆಗಿಂತ ಸುಮಾರು 3 ರೂ.ಗಳಷ್ಟು ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments