ಸಿಗರೇಟ್ ಸೇದುತ್ತಾ ಬಿಂದಾಸ್ ಆಗಿ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕ

Sampriya
ಸೋಮವಾರ, 14 ಅಕ್ಟೋಬರ್ 2024 (16:36 IST)
Photo Courtesy X
ಕೊಪ್ಪಳ:  ಚಾಲಕನೊಬ್ಬ ಬಿಂದಾಸ್‌  ಆಗಿ ಸಿಗರೇಟ್ ಸೇದುತ್ತಾ ಕೆಎಸ್‌ಆರ್‌ಟಿಸಿ ಬಸ್ ಚಾಲನೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಕರ್ನಾಟಕದ ದೇವರಾದ ಆಂಜನೇಯಸ್ವಾಮಿ ಚಿತ್ರವನ್ನು ತಕ್ಷಣಕ್ಕೆ ತೆಗೆದು ಹಾಕುವಾಗ ಇಂತಹ ವ್ಯಕ್ತಿಯ ವಿರುದ್ಧ ಯಾವಾಗ ಕ್ರಮ ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್​ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಬಸ್ ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ನಿಪ್ಪಾಣಿ ಘಟಕದ  ಬಸ್​​​​ ಚಾಲಕ ಧೂಮಪಾನ ಮಾಡುತ್ತ ವಾಹನ ಓಡಿಸಿದ್ದಾನೆ.

ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎ 23, ಎಫ್ 1045 ನಂಬರ್​ನ ಕೆಎಸ್​ಆರ್​ಟಿಸಿ ಬಸ್​ ಗಂಗಾವತಿಯಿಂದ ಕೋಲ್ಹಾಪುರಕ್ಕೆ ತೆರಳುತ್ತಿತ್ತು.

ಚಾಲಕ ಬೀಡಿ ಸೇದುತ್ತಾ ಬಸ್ ಚಲಾಯಿಸಿದ್ದಾನೆ. ಚಾಲಕ ಧೂಮಪಾನ ಮಾಡುವುದನ್ನು ಅಲ್ಲೇ ಕುಳಿತಿದ್ದ ಪ್ರಯಾಣಿಕ ಮೊಬೈಲ್‌ನಲ್ಲಿ ಸೆರೆಹಿಡಿದ್ದಾನೆ. ಈ ಬಗ್ಗೆ ಪ್ರಯಾಣಿಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments