ಜನರಿಗೆ ಬಸ್ ಟಿಕೆಟ್ ದರ ಏರಿಕೆ ಬರೆ ಹಾಕಿದ್ರೇನಂತೆ ನೌಕರರಿಗೆ ಸಿದ್ದರಾಮಯ್ಯ ಕೊಟ್ರು ಬಂಪರ್ ಗಿಫ್ಟ್

Sampriya
ಸೋಮವಾರ, 6 ಜನವರಿ 2025 (17:34 IST)
Photo Courtesy X
ಬೆಂಗಳೂರು:  ಕೆಎಸ್‌ಆರ್‌ಟಿಸಿ ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತಾ ಚಿಕಿತ್ಸಾ ಯೋಜನೆಗೆ ಕೆಎಸ್‌ಆರ್‌ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಈ ಮೂಲಕ ಹಲವು ವರ್ಷಗಳ ಬೇಡಿಕೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಯೋಜನೆಯ ಪ್ರಯೋಜನಗಳು ಹೀಗಿದೆ: ಈ ಯೋಜನೆಯಡಿ ನೌಕರನ ಕುಟುಂಬದಲ್ಲಿ ತಂದೆ-ತಾಯಿ, ಹೆಂಡತಿ ಮಕ್ಕಳು ಎಲ್ಲರಿಗೂ ಚಿಕಿತ್ಸೆ ಸಿಗಲಿದೆ. ಯಾವುದೇ ಕಾಯಿಲೆ ಮತ್ತು ಎಷ್ಟೇ ಖರ್ಚಾದರೂ ಈ ಯೋಜನೆ ಅಡಿ ಚಿಕಿತ್ಸೆ ಸಿಗಲಿದೆ. ನೌಕರರು ಪ್ರತಿ ತಿಂಗಳು 650ರಂತೆ ವಾರ್ಷಿಕ 8 ಸಾವಿರ ರೂ. ಕಟ್ಟಬೇಕು. ಈ ಯೋಜನೆ ಅಡಿ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. 250 ಆಸ್ಪತ್ರೆಗಳು 24 ಡಯಾಗ್ನಸ್ಟಿಕ್ ಸೆಂಟರ್, 6 ಆಯುರ್ವೇದ ಆಸ್ಪತ್ರೆಗಳು ಈ ಯೋಜನೆ ಅಡಿ ಸರ್ಕಾರ ಎಮ್‌ಒಯು ಮಾಡಿಕೊಂಡಿದೆ.

ನಂತರ ಮಾತನಾಡಿದ ಅವರು, ಬಹಳ ದಿನದಿಂದ ಇದಕ್ಕೆ ಬೇಡಿಕೆ ಇತ್ತು. ನೌಕರರು ಮತ್ತು ಅವರ ಕುಟುಂಬಗಳಿಗೂ ಅನ್ವಯ ಆಗಲಿದೆ, ಉಪಯೋಗ ಆಗಲಿದೆ. ಎಲ್ಲಿ ಬೇಕಾದರೂ ಚಿಕಿತ್ಸೆ ಪಡೆಯಬಹುದು. ಕಾರ್ಡ್ ತೋರಿಸಿದರೆ ಚಿಕಿತ್ಸೆ ಕೊಡುತ್ತಾರೆ. ಏನೇ ಕಾಯಿಲೆ ಇದ್ದರೂ ಚಿಕಿತ್ಸೆ ಸಿಗಲಿದೆ ಎಂದು ಹೇಳಿದರು.

ಇದೇ ವೇಳೆ ನೊಂದಾಯಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದ ಸಿಎಂ, ಯಾವುದೇ ಕಾರಣಕ್ಕೂ ತಿರಸ್ಕಾರದಿಂದ ನೌಕರರನ್ನು ನೋಡಬೇಡಿ. ಆಸ್ಪತ್ರೆಗಳಿಗೆ ನೌಕರರು ಬಂದ ಕೂಡಲೇ ಚಿಕಿತ್ಸೆ ಕೊಡಬೇಕು. ಹಣ ನೀಡಿ ಚಿಕಿತ್ಸೆ ಪಡೆಯುವವರ ಹಾಗೆಯೇ ನೌಕರರಿಗೂ ಚಿಕಿತ್ಸೆ ನೀಡಬೇಕೆಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments