Publish Date: Mon, 06 Jul 2026 (18:25 IST)
Updated Date: Mon, 06 Jul 2026 (18:28 IST)
ಕಲಬುರಗಿ: ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಸೇರಿ ಮೂವರು ಸಿಬ್ಬಂದಿಗಳನ್ನು ಸೇವನೆಯಿಂದ ಅಮಾನತು ಮಾಡಲಾಗಿದೆ.
ಕಲಬುರಗಿಯಿಂದ ಚಿಂಚೋಳಿಗೆ ರಾತ್ರಿ ವೇಳೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಹೆಡ್ ಲೈಟ್ ಇಲ್ಲದೇ ಮೊಬೈಲ್ ಟಾರ್ಚ್ ನ ಬೆಳಕಿನಲ್ಲಿ ಓಡಿಸಲಾಗಿತ್ತು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.
ನಿರ್ವಾಹಕ ತನ್ನ ಮೊಬೈಲ್ ಟಾರ್ಚ್ ಹಿಡಿದಿದ್ದರೆ ಚಾಲಕ ಅದೇ ಬೆಳಕಿನಲ್ಲಿ ಬಸ್ ಓಡಿಸುತ್ತಿದ್ದ. ಇದು ಅಪಾಯಕಾರಿಯಾಗಿತ್ತು. ಪ್ರಯಾಣಿಕರ ಜೀವಕ್ಕೆ ಕುತ್ತು ತರುವಂತಹ ಇಂತಹ ಘಟನೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ಕಂಡುಬಂದಿತ್ತು.
ಇದರ ಬೆನ್ನಲ್ಲೇ ಎಚ್ಚೆತ್ತ ಕೆಎಸ್ಆರ್ ಟಿಸಿ ಆಂತರಿಕ ತನಿಖೆ ನಡೆಸಿ ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿ ಮತ್ತು ತಾಂತ್ರಿಕ ಮೇಲ್ವಿಚಾರಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ