ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಿಲ್ಲರ್‌ ಡಿಕ್ಕಿ ಹೊಡೆದ ಬಸ್

Webdunia
ಸೋಮವಾರ, 9 ಮೇ 2022 (15:40 IST)
ಬೆಂಗಳೂರಿನ ಗುಂಡಿಮಯ ರಸ್ತೆಗಳಲ್ಲಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ ಸೋಮವಾರ ಬೆಳ್ಳಂ ಬೆಳ್ಳಗ್ಗೆ ಮೈಸೂರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬಸ್ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರಿದ್ದರು. ಗುಂಡಿ ತಪ್ಪಿಸಲು ಹೋಗಿ ಬಸ್ ಮೆಟ್ರೋ ಪಿಲ್ಲರ್ಗೆ ಗುದ್ದಿದ್ದ ರಭಸಕ್ಕೆ ನಾಲ್ವರ ಸ್ಥಿತಿ ಗಂಭೀರಾಗಿದೆ ಮತ್ತು 25 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾತನಾಡಿರುವ ಚಾಲಕ ಮಂಜುನಾಥ್ ಮೆಟ್ರೋ ಪಿಲ್ಲರ್ 546ರ ಬಳಿ ದೊಡ್ಡ ಗುಂಡಿ ಇತ್ತು ಅದನ್ನು ತಪ್ಪಿಸೋಕೆ ಹೋಗಿ ಪಿಲ್ಲರ್ಗೆ ಗುದ್ದಿದೆ ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರಿದ್ದರು ಎಲ್ಲರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಬಸ್ ಮೊದಲು ಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿತ್ತು ನಾನು ಅದನ್ನು ತಪ್ಪಿಸಲು ಹೋಗಿ 4 ಅಡಿಯ ತಡೆಗೋಡೆಗೆ ಗುದ್ದಿ ಆ ನಂತರ ಪಿಲ್ಲರ್ಗೆ ಗುದ್ದಿತ್ತು. ಒಂದು ವೇಳೆ ಮೆಟ್ರೋ ಪಿಲ್ಲರ್ ಇಲ್ಲದಿದ್ದಲ್ಲಿ ರಸ್ತೆಯ ಮತ್ತೊಂದು ಬದಿಗೆ ಹೋಗಿ ದೊಡ್ಡ ಆನಾಹುತವೇ ಸಂಭವಿಸಿರುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಚಾಲಕ ಮಂಜುನಾಥ್ ಹಾಗೂ ನಿರ್ವಾಹಕ ವೆಂಕಟರಮಣಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುತೇಕ ಪ್ರಯಾಣಿಕರಿಗೆ ಮುಖದ ಭಾಗದಲ್ಲಿ ಗಾಯಗಳಾಗಿದ್ದು ಎಲ್ಲರು ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು  ಚಾಲಕ ಮಂಜುನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments