ಕೆಎಸ್ಆರ್ ಟಿಸಿ ಎಲ್ಲಾ ಬಸ್ ಗಳಲ್ಲೂ ಕ್ಯೂ ಆರ್ ಕೋಡ್: ಚಿಲ್ಲರೆ ಚಿಂತೆ ಇನ್ನು ಬೇಡ

Krishnaveni K
ಬುಧವಾರ, 4 ಡಿಸೆಂಬರ್ 2024 (11:11 IST)
ಬೆಂಗಳೂರು: ಕೆಎಸ್ ಆರ್ ಟಿಸಿಯ ಎಲ್ಲಾ ಬಸ್ ಗಳಲ್ಲಿ ಇನ್ನು ಮುಂದೆ ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೆ ಬಂದಿದ್ದು ಇನ್ನು ಮುಂದೆ ಚಿಲ್ಲರೆಗಾಗಿ ಕಂಡಕ್ಟರ್ ಜೊತೆ ಕಿತ್ತಾಟವಾಡಬೇಕಿಲ್ಲ.

ಇತ್ತೀಚೆಗಿನ ದಿನಗಳಲ್ಲಿ ಎಲ್ಲಾ ಕಡೆ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ಬಂದಿದೆ. ಇದರಿಂದ ಚಿಲ್ಲರೆಗಾಗಿ ಜನ ಪರದಾಡುವಂತಾಗಿದೆ. ಬಸ್ ಗಳಲ್ಲೂ ಚಿಲ್ಲರೆ ನೀಡದೇ ಪ್ರಯಾಣಿಕರಿಂದ ಕಂಡಕ್ಟರ್ ಗಳಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣಕ್ಕೆ ಈಗ ಕಂಡಕ್ಟರ್ ಗಳಿಗೆ ಇಟಿಎಂ ಮೆಷಿನ್ ಗಳನ್ನು ನೀಡಲಾಗಿದ್ದು, ಇನ್ನು ಮುಂದೆ ಎಲ್ಲಾ ಬಸ್ ಗಳಲ್ಲಿ ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೆ ಬರಲಿದೆ.

ಈಗಾಗಲೇ 9 ಸಾವಿರ ಬಸ್ ಗಳಿಗೆ ಈ ಯಂತ್ರಗಳನ್ನು ನೀಡಲಾಗಿದೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ. ಪ್ರಾಯೋಗಿಕವಾಗಿ ಕಳೆದ ತಿಂಗಳೇ ಕೆಲವು ತಿಂಗಳಿನಿಂದ ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೆ ಬಂದಿತ್ತು. ಈಗ ಎಲ್ಲಾ ಬಸ್ ಗಳಿಗೂ ಈ ವ್ಯವಸ್ಥೆ ವಿಸ್ತರಣೆಯಾಗಲಿದೆ ಎಂದು ಕೆಎಸ್ ಆರ್ ಟಿಸಿ ಮೂಲಗಳು ಹೇಳಿವೆ.

ಕ್ಯೂ ಆರ್ ಕೋಡ್ ವ್ಯವಸ್ಥೆಯಿಂದ ಸಾಕಷ್ಟು ಉಪಯೋಗವಾಗಿದೆ. ಸಂಸ್ಥೆಯ ಆದಾಯವೂ ಹೆಚ್ಚಿದೆ. ಡೈನಾಮಿಕ್ ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೆ ತಂದಿರುವುದು ಕರ್ನಾಟಕದಲ್ಲೇ ಮೊದಲು. ಹೀಗಾಗಿ ಇದು ರಾಜ್ಯಕ್ಕೆ ಹೆಗ್ಗಳಿಕೆಯ ವಿಚಾರವೂ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments